ಶ್ರೀನಗರ : ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ ಗುಂಡಿನ ದಾಳಿ ನಡೆಸಿದ್ದು, ಉಗ್ರನಿಂದಲೂ ಪ್ರತಿ ದಾಳಿ ನಡೆದಿದೆ. ಅಂತಿಮವಾಗಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಉಗ್ರನ ಬಳಿಯಿದ್ದ ಎ.ಕೆ 47 ಬಂದೂಕು ಸಹಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಇನ್ನು ಕೆಲ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.