Untitled Document
Sign Up | Login    
Dynamic website and Portals
  
August 27, 2014

ಸಚಿವ ಸಂಪುಟದಲ್ಲಿ ಕಳಂಕಿತರಿಗೆ ಸ್ಥಾನ ನೀಡಬಾರದು: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್

ನವದೆಹಲಿ : ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕಳಂಕಿತ ಜನಪ್ರತಿನಿಧಿಗಳನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ನ್ನು ಸುಪ್ರೀಂ ಕೋರ್ಟ್ ಆ.27ರಂದು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ಬಗ್ಗೆ ಜನಸಾಮಾನ್ಯರು ಅಪಾರ ನಂಬಿಕೆ ಹೊಂದಿರುತ್ತಾರೆ, ಜನಸಾಮಾನ್ಯರ ನಂಬಿಕೆಗಳನ್ನು, ಭಾರತದ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯಬೇಕಾಗಿರುವುದು ಪ್ರಧಾನಿ, ಮುಖ್ಯಮಂತ್ರಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಚಿವ ಸಂಪುಟ ರಚನೆ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಆದರೆ ಪ್ರಧಾನಿ, ಮುಖ್ಯಮಂತ್ರಿಗಳು ಕಳಂಕಿತರಿಗೆ ಸಚಿವ ಸ್ಥಾನ ನೀಡಬಾರದು ಎಂದು ಸಲಹೆ ನೀಡುತ್ತಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಕಳಂಕಿತ ರಾಜಕಾರಣಿಗಳನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಯುಪಿಎ ಸರ್ಕಾರದ ಅವಧಿಯಲ್ಲಿ ಮನೋಜ್ ನರುಲ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿ ಆರ್.ಎಂ. ಲೋಧಾ ನೇತೃತ್ವದ ಸಂವಿಧಾನಿಕ ಪೀಠ ಅರ್ಜಿಯನ್ನು ವಜಾಗೊಳಿಸಿ ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿಗಳೇ ಕ್ರಮ ಕೈಗೊಳ್ಳಬೇಕೆಂಬ ಮಹತ್ವದ ಆದೇಶ ನೀಡಿದೆ.

ಎ.ಡಿ.ಆರ್(Association for Democratic Reforms)ಪ್ರಕಾರ ಸಂಸತ್ ನಲ್ಲಿರುವ 541 ಜನಪ್ರತಿನಿಧಿಗಳ ಪೈಕಿ 186 ಜನಪ್ರತಿನಿಧಿಗಳು (ಶೇ.34) ಕ್ರಿಮಿನಲ್ ಪ್ರಕರಣ, ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited