ಬೆಂಗಳೂರು : ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11 ಸದಸ್ಯರು ಜೀವ ರಕ್ಷಣೆಗಾಗಿ ಕೂಗಾಡುತ್ತಿದ್ದರೂ ಯಾರೂ ರಕ್ಷಣೆ ಮಾಡುತ್ತಿಲ್ಲ ಎಂದು ಕೃಷ್ಣಮೂರ್ತಿ ಅಳಲು ತೋಡಿಕೊಂಡಿದ್ದಾರೆ.
ಜಮ್ಮುವಿನಲ್ಲಿ ನಿರಂತರವಾಗಿ ಮಳೆಸುರಿಯುತ್ತಿದ್ದು, ಪ್ರವಾಹ ಉಂಟಾದ ಪರಿಣಾಮ ನಮ್ಮ ಕುಟುಂಬದ ಇತರ ಸದಸ್ಯರು ಎಲ್ಲೆಲ್ಲಿದ್ದಾರೆ ಎಂಬುದೂ ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ. ಶ್ರೀನಗರದ ಲಾಡ್ಜ್ ಒಂದರಲ್ಲಿ ತಂಗಿದ್ದ ವೇಳೆ ಲಾಡ್ಜ್ ಗೆ ನೀರು ನುಗ್ಗಿ ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.