ಲಖ್ನೌ : 'ಬಿಜೆಪಿ'ಯ ಒಳ್ಳೆದಿನಗಳು (ಅಚ್ಚೆ ದಿನ್)ಮುಗಿದಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ಸೆ.13ರಂದು ನಡೆದ 3 ಲೋಕಸಭೆ 33 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶದಲ್ಲಿ ಉತ್ತರಪ್ರದೇಶ ಉಪಚುನಾವಣೆಯಲ್ಲಿ ಎಸ್ಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅಖಿಲೇಶ್ ಯಾದವ್, ಬಿಜೆಪಿಯ ಅಚ್ಚೆ ದಿನಗಳು ಮುಗಿದಿದೆ ಎಂಬುದು ಚುನಾವಣೆ ಫಲಿತಾಂಶದ ಮೂಲಕ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಉಪಚುನಾವಣೆ ಫಲಿತಾಂಶ ಸಮಾಜವಾದಿ ಪಕ್ಷಕ್ಕೆ ಸಿಕ್ಕ ಬಹುದೊಡ್ಡ ಗೆಲುವು. ರಾಜ್ಯದ ಜನತೆ ಸಾಮರಸ್ಯವನ್ನು ಅಪೇಕ್ಷಿಸುತ್ತಾರೆ ಹೀಗಾಗಿ ಚುನಾವಣೆ ಮೂಲಕ ಕೋಮುಶಕ್ತಿಗಳಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದಿದ್ದಾರೆ.
ರಾಜ್ಯದ ಜನತೆ ಪಕ್ಷದ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಉಪಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದೆ. ಉತ್ತರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳ ಪೈಕಿ 9ರಲ್ಲಿ ಆಡಳಿತರೂಢ ಎಸ್.ಪಿ ಮುನ್ನಡೆ ಕಾಯ್ದುಕೊಂಡಿದೆ.