ಮೈಸೂರು : ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದರು.
ಮಳೆ ಬರೋ ನಿರೀಕ್ಷೆಯಿದ್ದ ಹಿನ್ನಲೆಯಲ್ಲಿ ಚರಂಡಿಗಳನ್ನು ಶುಚಿಗೊಳಿಸಲಾಗಿತ್ತು. ಮಳೆ ಅವಾಂತರದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಬಿಬಿಎಂಪಿಯಲ್ಲಿ ಹಣವಿಲ್ಲ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಾಲಿಕೆಯಲ್ಲಿ ಹಣವಿಲ್ಲ ಎಂದು ಸುಮ್ಮನೆ ಕುಳಿತುಕೊಂಡರೆ ಆಗದು, ಹಣ ಕ್ರೂಢೀಕರಣದ ವ್ಯವಸ್ಥೆ ಮಾಡಬೇಕು. ಮೇಯರ್ ಅವರು ಕಂದಾಯ ವಸೂಲಿಗೆ ಸೂಚಿಸಬೇಕು ಎಂದು ತಿಳಿಸಿದರು.