ಮುಂಬೈ : ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ ಬಹುತೇಕ ರಾಜಕೀಯ ನಾಯಕರು ಹೇಳುತ್ತಿರುವಾಗ ರಾಜ್ ಠಾಕ್ರೆ ಬೆಳಗಾವಿ ಕರ್ನಾಟಕದ ಭಾಗ ಎಂಬ ರೀತಿ ಹೇಳಿಕೆ ನೀಡಿರುವುದು ವಿಶೇಷ.
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಎಂದಿಗಾದರೂ ಇತ್ಯರ್ಥವಾಗಲಿದೆ ಎಂಬ ಭರವಸೆ ನನಗಿಲ್ಲ ಎಂದು ಇದೇ ವೇಳೆ ಹೇಳಿದ್ದಾರೆ.
ಬಹಳ ವರ್ಷಗಳಿಂದ ಉಭಯ ರಾಜ್ಯಗಳ ನಡುವೆ ಗಡಿ ವಿವಾದವಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕರು ಗಂಭೀರವಾಗ್ತಿ ಯತ್ನಿಸಿಲ್ಲ ಎಲ್ಲರೂ ವಿಷಯವನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿದ್ದಾರೆ ಕೇವಲ ಬಂದ್ ಅಥವಾ ಪ್ರತಿಭಟನೆಯಿಂದ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ತಿಳಿಸಿದ್ದಾರೆ.