Untitled Document
Sign Up | Login    
Dynamic website and Portals
  
October 21, 2014

ಅಕ್ರಮ ಆಸ್ತಿ ಗಳಿಕೆ ಪ್ರಕರಣ :ಬಿಎಸ್ ವೈ, ಈಶ್ವರಪ್ಪಗೆ ಸಂಕಷ್ಟ

ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳನ್ಯಾಯಾಲಯ ನೀಡಿದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಮತ್ತೆ ತನಿಖೆ ನಡೆಸಲು ಆದೇಶ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಅರಣ್ಯ ಭೂಮಿನ್ನು ಕಬಳಿಕೆ ಮಾಡಿ ಅದನ್ನು ಧವಳಗಿರಿ ಎಷ್ಟೇಟ್ ಹೆಸರಲ್ಲಿ ನೋಂದಣಿ ಮಾಡಿದ ಆರೋಪ, ಅರುಣಾದೇವಿ ವಿರುದ್ಧ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನಾಲ್ಕು ನಿವೇಶನ ಪಡೆದ ಆರೋಪ, ಹಾಗೂ ಕೆ.ಎಸ್.ಈಶ್ವರಪ್ಪ ವಿರುದ್ಧ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಕೆಳ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು.

ಆದರೆ ಪೂರ್ವಾನುಮತಿ ಇಲ್ಲದ ಕಾರಣ ಕೆಳ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ವಿನೋದ್ ಎಂಬುವವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಪರಿಗಣಿಸಿದ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಅರ್ಜಿ ಪರಿಗಣಿಸುವಂತೆ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited