ಪಾಟ್ನಾ : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ.
ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ ನಿತೀಶ್ ಕುಮಾರ್, ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳಲು ಜೆಡಿಯು ಪಕ್ಷಕ್ಕೆ ಸೂಚಿಸಿದ್ದಾರೆ. ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮನ್ನು ನಿತೀಶ್ ಕುಮಾರ್ ಅವರೇ ಉದ್ಘಾಟಿಸಬೇಕಿತ್ತು. ಎನ್ನುವುದು ವಿಶೇಷ.
ಹಲವು ಹಿರಿಯ ಜೆಡಿಯು ನಾಯಕರು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದರೂ ಕಾಂಗ್ರೆಸ್ ನ ಹಿರಿಯ ನಾಯಕರಾದ ಎ.ಐ.ಸಿ.ಸಿ ಕಾರ್ಯದರ್ಶಿ ಸಿ.ಪಿ ಜೋಷಿ ಮತ್ತು ಮಾಜಿ ಲೋಕಸಭಾ ಸ್ಪೀಕರ್ ಮೀರಾ ಜೋಷಿ ಅವರೊಂದಿಗೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹಾಜರಿದ್ದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳಲು ನಿತೀಶ್ ಕುಮಾರ್ ತಮ್ಮ ಪಕ್ಷಕ್ಕೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆಗೂ ಮುಂಚೆ ಬಿಜೆಪಿ ಜೊತೆ ತನ್ನ ಸಖ್ಯವನ್ನು ತೊರೆದಿದ್ದ ಜೆಡಿಯು, ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿತ್ತು.