BW News Bureau : ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು ಸಿ.ಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರಿಂದ ತಡೆ ಉಂಟಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ, ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು 20ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ. ಇತ್ತೀಚೆಗಷ್ಟೇ ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತಾ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸಿತ್ತಿದೆ. ಸಿ.ಐ.ಡಿ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸವಿಲ್ಲ. ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕೆಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಅತ್ಯಾಚಾರದ ವಿರುದ್ಧ ಹೋರಾಟವನ್ನು ಹಕ್ಕಿತ್ತಲು ರಾಜ್ಯ ಸರ್ಕಾರ ಷಡ್ಯಂತರ ರೂಪಿಸುತ್ತಿದೆ. ಯಾವುದೇ ಕಾರಣಕ್ಕೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.
ಪ್ರತಿಭಟನಾ ರ್ಯಾಲಿಯಲ್ಲಿ ಮಹಿಳಾ ಮೋರ್ಚಾದ ಅದ್ಯಕ್ಷೆ ಶಶಿಕಲಾ ಜೊಲ್ಲೆ, ಮಾಳವಿಕಾ ಅವಿನಾಶ್, ಮಾಜಿ ಗೃಹ ಸಚಿವ ಅಶೋಕ್, ಸಂಸದ ಯಡಿಯೂರಪ್ಪ, ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಪಾಲ್ಗೊಂಡಿದ್ದರು.