ನವದೆಹಲಿ : ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ
ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನ.9ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರಿಗೆ ರಕ್ಷಣಾ ಖಾತೆ ನೀಡುವ ಸಾಧ್ಯತೆಯಿದೆ.
ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಪುತ್ರ ಜಯಂತ್ ಸಿನ್ಹಾ ಹಾಗೂ ಕಲ್ಲಿದ್ದಲು ಹಗರಣ ಬಯಲಿಗೆಳೆದ ಖ್ಯಾತಿಯ ಚಂದ್ರಾಪುರ ಸಂಸದ ಹಂಸರಾಜ್ ಅಹಿರ್, ಮುಕ್ತಾರ್ ಅಬ್ಬಾಸ್ ನಖ್ವಿ, ರಾಜೀವ್ ಪ್ರತಾಪ್ ರೂಢಿ ಸೇರಿದಂತೆ ಇನ್ನೂ ಏಳು ಮಂದಿಗೆ ಸಂಪುಟದಲ್ಲಿ ಸ್ಥಾನಸಿಗುವ ಸಾಧ್ಯತೆಯಿದೆ.
ಪ್ರಸ್ತುತ ಸಂಪುಟದಲ್ಲಿ ರಾಜ್ಯ ಸಚಿವರಾಗಿರುವ ಪ್ರಕಾಶ್ ಜವೇಡಕರ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಗುವ ಸಾಧ್ಯತೆಗಳಿವೆ.