ಲಖ್ನೋ : ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ.
ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಪ್ರಧಾನಿ ಮೋದಿ ದತ್ತು ಪಡೆಯಲಿದ್ದಾರೆ.
ಇದೇ ವೇಳೆ ವಾರಾಣಸಿ ಭೇಟಿ ವೇಳೆ ಮೋದಿ ನೇಕಾರರ ಅನುಕೂಲಕ್ಕಾಗಿ ವ್ಯಾಪಾರ ಸೌಲಭ್ಯ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.