BW News Bureau : ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಡಿ.9ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದ ದಿನ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಸದ ಯಡಿಯೂರಪ್ಪ ಹೇಳಿದ್ದಾರೆ.
ಅತಿ ವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಬೆಳೆಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡದೇ ಇರುವುದಕ್ಕೆ ಸರ್ಕಾರದ ವಿರುದ್ಧ ಯಡಿಯೂರಪ್ಪ ನೇತೃತ್ವದಲ್ಲಿ ನ.18ರಂದು ಬನ್ನಪ್ಪ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯಡಿಯೂರಪ್ಪ, ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ಎಂದು ಆರೋಪಿಸಿದ್ದಾರೆ. ರೈತ ವಿರೋಧಿಯಾಗಿರುವ ಸರ್ಕಾರ ಕೂಡಲೇ ತೊಲಗಬೇಕೆಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸರ್ಕಾರ ಎಲ್ಲಾ ವಿಧದಲ್ಲೂ ವಿಫಲವಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಡಿ.9ರಂದು ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಎಂ.ಎಲ್.ಸಿ ಅಶ್ವತ್ಥ ನಾರಾಯಣ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.