Untitled Document
Sign Up | Login    
Dynamic website and Portals
  
November 19, 2014

ಮೂಢನಂಬಿಕೆ ಕಾಯ್ದೆ : ಉಪವಾಸ ಅಂತ್ಯಗೊಳಿಸಲಿರುವ ಪ್ರಗತಿ ಪರ ಮಠಾಧೀಶರು

BW News Bureau : 'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರಗತಿಪರ ಮಠಾಧೀಶರು ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಠಾಧೀಶರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುವ ನಿರ್ಧಾರ ಪ್ರಕಟಿಸಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಅವರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ ಮಾಡಬೇಕೆಂದು ಮನವಿ ಸಲ್ಲಿಸಿದ್ದಾರೆ.

ಸಿ.ಎಂ ಭೇಟಿ ನಂತರ ಮಾತನಾಡಿದ ನಿಡುಮಾಮಿಡಿ ಶ್ರೀ, ಮನವಿಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಉಪವಾಸ ಅಂತ್ಯಗೊಳಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿದ್ದು ಬೇಡಿಕೆ ಈಡೇರಿಕೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಋತುಚಕ್ರದ ವೇಳೆ ಹೆಣ್ಣುಮಕ್ಕಳಿಗೆ ಬಹಿಷ್ಕಾರ ಹಾಕುವುದರ ಬಗ್ಗೆ ಖಾಸಗಿ ಮಾಧ್ಯಮ ಹೆಣ್ಣಾಗಿದ್ದೇ ತಪ್ಪಾ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಇಂತಹ ಅನಿಷ್ಠ ಪದ್ಧತಿಗಳನ್ನು ನಿರ್ನಾಮ ಮಾಡಲು ಮೂಢನಂಬಿಕೆ ಕಾಯ್ದೆ ಜಾರಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ 200ಕ್ಕೂ ಹೆಚ್ಚು ಸ್ವಾಮೀಜಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited