Untitled Document
Sign Up | Login    
Dynamic website and Portals
  
November 19, 2014

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ಬೆಂಗಳೂರು : ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ.

ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮೇಳದಲ್ಲಿ ನಶಿಸಿ ಹೋಗುತ್ತಿರುವ ಕೃಷಿಗೆ ಮರು ಜೀವ ನೀಡಿರುವ ಗಣ್ಯರನ್ನು ಕರೆದಿರುವುದು ಶ್ಲಾಘನೀಯ ಎಂದರು.

ದೇಶದ ಶೇ.65ರಷ್ಟಿರುವ ರೈತಾಪಿ ವರ್ಗದವರು ಕೃಷಿ ವಿಶ್ವವಿದ್ಯಾಲಯ ಗಳ ಸಂಶೋಧನೆಗಳನ್ನು ಸದುಪಯೋಗಪಡಿಸಿಕೊಂಡರೆ ಹೆಚ್ಚಿನ ಬೆಳೆ ಬೆಳೆಯಬಹುದಾಗಿದೆ. ಇರುವ ಜಲಸಂಪನ್ಮೂಲ ಬಳಕೆ ಮಾಡಿಕೊಂಡು ವರ್ಷಕ್ಕೆ ಮೂರು ಬೆಳೆ ಬೆಳೆಯಬಹುದು. ಆದರೆ ಬಹುತೇಕ ರೈತರು ಕೇವಲ ಒಂದು ಬೆಳೆ ಬೆಳೆಯುತ್ತಿದ್ದಾರೆ ಎಂದು ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿದರು.

ನೀರಿಗಾಗಿ ಪರಸ್ಪರ ಹೋರಾಟ ನಡೆಸುವುದನ್ನು ಬಿಟ್ಟು ಅವಶ್ಯಕತೆ ಇರುವ ನೀರು ಬಳಕೆ ಮಾಡಿಕೊಂಡು ಉತ್ತಮ ಬೆಳೆ ಬೆಳೆಯಬೇಕು ಎಂದು ಸಲಹೆ ನೀಡಿದರು. ವ್ಯರ್ಥವಾಗಿ ಹರಿದು ಹೋಗುವ ನೀರು ಸಮುದ್ರ ಸೇರದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಣೆಕಟ್ಟೆಗಳನ್ನು ಕಟ್ಟುವ ಮೂಲಕ ನೀರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರೈತರನ್ನು ಸಶಕ್ತರನ್ನಾಗಿಸಿದರೆ ದೇಶದ ಶಕ್ತಿ ಹೆಚ್ಚುತ್ತದೆ. ಹೀಗಾಗಿ ಕೃಷಿ ಸಚಿವರು ಎಲ್ಲಾ ರೈತರ ಜಮೀನುಗಳಿಗೆ ನೀರು ಹರಿಸುವ ಹರಸಾಹಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited