ನವದೆಹಲಿ : ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ.
ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ ನೀಡಲಾಗಿದೆ. ಕರ್ನಾಟಕದ ಸಂಸದರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್, ಎಚ್.ಡಿ. ದೇವೇಗೌಡ ಅವರಿಗೂ ಮೊದಲ ಸಾಲಲ್ಲಿ ಕುಳಿತುಕೊಳ್ಳುವ ಅವಕಾಶ ಸಿಕ್ಕಿದೆ.
ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಯಾವ ನಾಯಕರು ಯಾವ ಸಾಲಿನಲ್ಲಿ ಕುಳಿತುಕೊಳ್ಳಬೇಕೆಂಬುದನ್ನು ಈಗಾಗಲೇ ನಿರ್ಧರಿಸಲಾಗಿದೆ.
ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಮೊದಲ ಸಾಲಿನಲ್ಲಿ ಪ್ರಧಾನಿ ಮೋದಿ ಅವರ ಪಕ್ಕದ ಸೀಟಲ್ಲಿ ಕುಳಿತುಕೊಳ್ಳಲಿದ್ದಾರೆ. ನಂತರ ಅದೇ ಸಾಲಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆಸೀನರಾಗಲಿದ್ದಾರೆ.
ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಸ್ಪೀಕರ್ ಮೀರಾ ಕುಮಾರ್ ಇಂದು ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.