Untitled Document
Sign Up | Login    
Dynamic website and Portals
  
November 25, 2014

ಸರ್ಕಾರದಿಂದ ಮಾಧ್ಯಮದ ಮೇಲೆ ದೌರ್ಜನ್ಯ: ಸಿ.ಎಂ ಭೇಟಿ ಮಾಡಲು ಮುಂದಾದ ಸಂಪಾದಕರು

ಟಿವಿ9 ಟಿವಿ9

ಬೆಂಗಳೂರು : ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸುದ್ದಿವಾಹಿನಿಗಳಾದ ಟಿವಿ9 ಹಾಗೂ ನ್ಯೂಸ್9 ಚಾನೆಲ್‌ಗಳ ಪ್ರಸಾರವನ್ನು ಕಳೆದ 17 ಗಂಟೆಗಳಿಂದ ಸ್ಧಗಿತಗೊಳಿಸಿರುವುದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿರುವ ಎಲ್ಲಾ ಸುದ್ದಿವಾಹಿನಿಗಳ ಸಂಪಾದಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಪ್ರೆಸ್ ಕ್ಲಬ್ ನಲ್ಲಿ ಸಭೆ ನಡೆಸಿರುವ ಪತ್ರಿಕೆ, ಸುದ್ದಿವಾಹಿನಿಗಳ ಸಂಪಾದಕರು ಸಿ.ಎಂ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಟಿವಿ9 ನಿರ್ದೇಶಕ ಮಹೇಂದ್ರ ಮಿಶ್ರಾ, ಉದಯವಾಣಿ ಪತ್ರಿಕೆಯ ಸಂಪಾದಕ ರವಿ ಹೆಗಡೆ, ಕನ್ನಡ ಪ್ರಭ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್, ಸೇರಿದಂತೆ ಎಲ್ಲಾ ಪತ್ರಿಕೆ ಹಾಗೂ ಸುದ್ದಿ ವಾಹಿನಿಗಳ ಸಂಪಾದಕರು ವಿಧನಸೌಧಕ್ಕೆ ಭೇಟಿ ನೀಡಲಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕೇಬಲ್ ಆಪರೇಟರ್‌ಗಳ ನಡುವೆ ನಡೆದ ಸಭೆಯಲ್ಲಿ ಸುದ್ದಿವಾಹಿನಿಗಳ ಕೇಬಲ್ ಮೂಲಕ ಟಿವಿ9 ಪ್ರಸಾರವನ್ನು ಸ್ಧಗಿತಗೊಳಿಸುವಂತೆ ಆದೇಶಿಸಿದ್ದರು. ಇಲ್ಲವಾದರೆ ಕೇಬಲ್ ಸಂಸ್ಥೆಗಳ ಮೇಲೆ ಭಾರಿ ತೆರಿಗೆ ಹಾಗೂ ದಂಡ ವಿಧಿಸುವುದಾಗಿ ಸಚಿವರು ಹೇಳಿದ್ದರೆಂದು ಚಾನೆಲ್ ಆರೋಪಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited