ಬೆಂಗಳೂರು : ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ರಾಜ್ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು.
ರಾಜ್ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ ,ನಟ ರವಿಚಂದ್ರನ್, ವಸತಿ ಸಚಿವ ಅಂಬರೀಶ್ ,ಗೃಹ ಸಚಿವ ಕೆ.ಜೆ.ಜಾರ್ಜ್ ,ಸಚಿವೆ ಉಮಾಶ್ರೀ, ವಿಧಾನಪರಿಷತ್ ಸದಸ್ಯೆ ತಾರಾ ನಿರ್ಮಾಪಕ ಮುನಿರತ್ನ ಮತ್ತು ರಾಕ್ ಲೈನ್ ವೆಂಕಟೇಶ್ ,ಸೇರಿದಂತೆ ಖ್ಯಾತ ಚಿತ್ರ ತಾರೆಯರು, ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ರಾಜ್ ಕುಮಾರ್ ಸ್ಮಾರಕದ ಲೋಕಾರ್ಪಣೆಯಾದ ಬಳಿಕ ಸಂಜೆ ಅರಮನೆ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ನಟಿ ಲೀಲಾವತಿ, ವಿನಯಾ ಪ್ರಸಾದ್, ದುನಿಯಾ ವಿಜಿ, ಶರಣ್, ಶ್ರೀಧರ್ ಸೇರಿದಂತೆ ಸಾಕಷ್ಟು ಹಿರಿಯ ಮತ್ತು ಕಿರಿಯ ಕಲಾವಿದರು ಶನಿವಾರ ಸಂಜೆ ಅರಮನೆ ಮೈದಾನದಲ್ಲಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.