BW News Bureau : 'ಮಲ್ಲೇಶ್ವರಂ' ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.
ಪ್ರತಿ ಮಳಿಗೆಗಳಿಗೂ ನೊಟೀಸ್ ನೀಡಿರುವ ಬಿಬಿಎಂಪಿ ಅಧಿಕಾರಿಗಳು, 7 ದಿನದ ಒಳಗೆ ಮಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಗಡುವು ಮುಕ್ತಾಯಗೊಳ್ಳುವುದರೊಳಗಾಗಿ ಮಳಿಗೆಗಳನ್ನು ಖಾಲಿ ಮಾಡದಿದ್ದರೆ ತೆರವುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರಂನ ಹೃದಯ ಭಾಗದಲ್ಲಿರೋ ಈ ಮಾರ್ಕೆಟ್ ತೆರವುಗೊಳಿಸಿ ಇದೇ ಸ್ಥಳದಲ್ಲಿ ಮಾಲ್ ನಿರ್ಮಾಣ ಮಾಡಲು ನೋಟಿಸ್ ನೀಡಲಾಗ್ತಿದೆ.
ಮಲ್ಲೇಶ್ವರಂ ಮಾರುಕಟ್ಟೆ ಹೋರಾಟ ಸಮಿತಿ ಕಾರ್ಯದರ್ಶಿ ಜಿ.ಚಂದ್ರಶೇಖರ್, ಮಾರುಕಟ್ಟೆಯಲ್ಲಿ 247 ವ್ಯಾಪಾರಿಗಳಿದ್ದಾರೆ. ನೂತನವಾಗಿ ನಿರ್ಮಿಸುತ್ತಿರುವ ಕಾಂಪ್ಲೆಕ್ಸ್ ನಲ್ಲಿ ಎಲ್ಲಾ ಅಂಗಡಿಗಳ ಮಾಲೀಕರಿಗೂ ಸ್ಥಳ ಒದಸಿಸುವ ಭರವಸೆ ನೀಡಿಲ್ಲ. ತಾತ್ಕಾಲಿಕ ಮಾರುಕಟ್ಟೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ಮಳಿಗೆ ತೆರವಿಗೆ ಹಲವು ಬಾರಿ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಮತ್ತೊಮ್ಮೆ ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ನೊಟೀಸ್ ನೀಡಿರುವುದರಿಂದ ಮತ್ತೊಮ್ಮೆ ಪ್ರತಿಭಟನೆ ಭುಗಿಲೇಳುವ ಸಾಧ್ಯತೆ ಇದೆ.