ಕಲಬುರ್ಗಿ : 'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ.
ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ ಎದುರು ಬೊಲೇರೋದಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಘಟನೆ ನಡೆದ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಮಹಮ್ಮದ್ ತಲೆಗೆ ತೀವ್ರವಾಗಿ ಗಾಯವಾಗಿದ್ದು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಳೆಯ ವೈಷಮ್ಯವೇ ಈ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.