ನವದೆಹಲಿ : ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್ ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಯಾವುದೇ ಕಾರಣಕ್ಕೂ ಐಪಿಎಲ್ ಗೆ ಸಂಬಂಧಿಸಿದ ವಿಚಾರಗಳಲ್ಲಿ ಮಧ್ಯ ಪ್ರವೇಶಿಸುವುದಿಲ್ಲ, ಅದರಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ.
ಅಮಾನತುಗೊಂಡಿರುವ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವ್ಯವಹಾರಗಳಿಂದ ದೂರ ಉಳಿಯಬೇಕು ಮತ್ತು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಛೀಮಾರಿಗೊಳಗಾಗಿರುವ ಅವರ ಅಳಿಯ ಗುರುನಾಥನ್ ಮೇಯಪ್ಪನ್ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು.
ಸಮಸ್ಯೆಗೆ ಪರಿಹಾರಗಳನ್ನು ಸೂಚಿಸುವಂತೆ ಮತ್ತು ಚೆನ್ನೈಸೂಪರ್ಕಿಂಗ್ಸ್ ಹಾಗೂ ಮೇಯಪ್ಪನ್ ವಿರುದ್ಧ ಪ್ರಸ್ತಾವಿತ ಕ್ರಮಗಳನ್ನು ತಿಳಿಸುವಂತೆ ಕೂಡ ಸುಪ್ರೀಂ ಕೋರ್ಟು ಸೂಚಿಸಿತ್ತು.