Untitled Document
Sign Up | Login    
Dynamic website and Portals
  
December 22, 2014

ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ: ಟಿ.ಬಿ ಜಯಚಂದ್ರ

ಮಸೂದೆ ಬಗ್ಗೆ ವಿಪಕ್ಷಗಳಿಂದ ಹಾಗೂ ಮಠ ಮಾನ್ಯಗಳಿಂದ ತೀವ್ರ ಆಕ್ಷೇಪ ಹಿನ್ನೆಲೆ

ಕಾನೂನು ಸಚಿವ ಟಿ.ಬಿ ಜಯಚಂದ್ರ ಕಾನೂನು ಸಚಿವ ಟಿ.ಬಿ ಜಯಚಂದ್ರ

ಬೆಂಗಳೂರು : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ಉಂಟಾಗಿರುವ ಬಗ್ಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಪ್ರತಿಕ್ರಿಯಿಸಿದ್ದು ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ ಎಂದು ಹೇಳಿದ್ದಾರೆ.

ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಮೂಲಕ ಸರ್ಕಾರ ಮಠಗಳನ್ನು ನಿಯಂತ್ರಿಸಲು ಯತ್ನಿಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಜಯಚಂದ್ರ, ಸರ್ಕಾರ, ಮಠಗಳ ಸ್ವಾಯತ್ತೆತೆಗೆ ಧಕ್ಕೆಯುಂಟಾಗದಂತೆ ನಡೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಮಠಗಳ ದಿನನಿತ್ಯದ ಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ವೇಳೆ ಮಠಗಳ ವಿರುದ್ಧ ದೂರು ಬಂದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸಲಿದೆ. ಮಠಗಳಲ್ಲಿ ಸಮಸ್ಯೆ ಕಂಡುಬಂದರೆ ಸರ್ಕಾರ ಅವುಗಳನ್ನು ನಿಯಂತ್ರಿಸುವ ಕಾಯ್ದೆ ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದರಿಂದ ಕಾಯ್ದೆ ರೂಪಿಸಲಾಗಿದೆ ಎಂದು ಜಯಚಂದ್ರ ತಿಳಿಸಿದ್ದಾರೆ. ಈ ವಿಧೇಯಕವನ್ನು ವಿಧಾನಸಭೆಯಲ್ಲಿ ಮಾತ್ರ ಮಂಡಿಸಲಾಗಿದೆ, ವಿಧಾನಪರಿಷತ್ ನಲ್ಲಿ ಚರ್ಚೆಯಾಗಬೇಕಾಗಿದೆ. ಆ ನಂತರ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited