ಕೊಲ್ಕತ್ತಾ : ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಇದ್ರಿಸ್ ಅಲಿ, ಮಮತಾ ಬಾನ್ಯರ್ಜಿಯವರನ್ನು ಯಾರು ಮುಟ್ಟಲಾಗದು. ಒಂದೇ ವೇಳೆ ಅವರನ್ನು ಮುಟ್ಟಿದ್ರೆ, ಇಡೀ ಪಶ್ಚಿಮ ಬಂಗಾಳವೇ ಸುಟ್ಟು ಭಸ್ಮವಾಗಲಿದೆ ಎಂದು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗಿದೆ.
ಈ ನಡುವೆ ಟಿಎಂಸಿ ಮತ್ತೊಬ್ಬ ಸಂಸದ ಸತಾಬ್ದಿ ರಾಯ್ ಅವರನ್ನು ವಿಚಾರಣೆ ನಡೆಸಲು ಸಿಬಿಐ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಮಮತಾ ಆಪ್ತ ಸಚಿವ ಮದನ್ ಮಿತ್ರಾ ಅವರನ್ನು ಸಿಬಿಐ ಬಂಧಿಸಿತ್ತು.