ಮುಂಬೈ : ಬೀಜಗಣಿತ ಮತ್ತು ಪೈಥಾಗೊರಸ್ ಪ್ರಮೇಯ ಮೂಲದಲ್ಲಿ ರೂಪಗೊಂಡಿದ್ದು ಭಾರತದಲ್ಲೇ ಆದರೆ ಇವುಗಳ ಮನ್ನಣೆ ಬೇರೆ ದೇಶಗಳು ಪಡೆದಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಭಾರತೀಯ ವಿಜ್ಞಾನ ಸಮಾವೇಶದಲ್ಲಿ ಮಾತನಾದಿದ ಅವರು, ಪ್ರಾಚೀನ ಭಾರತೀಯ ವಿಜ್ಞಾನಿಗಳು ತಾವು ಸಂಶೋಧನೆ ಮಾಡಿದ ಸಂಗತಿಗಳಿಗೆ ಬೇರೆ ದೇಶದವರು ಹೆಸರು ತೆಗೆದುಕೊಳ್ಳಲು ಉದಾರವಾಗಿ ಅವಕಾಶ ನೀಡಿದ್ದಾರೆ ಎಂದರು.
ನಮ್ಮ ವಿಜ್ಞಾನಿಗಳು ಪೈಥಾಗೊರಸ್ ಪ್ರಮೇಯವನ್ನು ಕಂಡುಹಿಡಿದರು, ಆದರೆ ನಾವು ಇದರ ಮನ್ನಣೆಯನ್ನು ಗ್ರೀಕರಿಗೆ ಬಿಟ್ಟುಕೊಟ್ಟೆವು. ಅರಬ್ಬರಿಗೂ ಮುಂಚೆಯೇ ನಮಗೆ ಬೀಜಗಣಿತ ತಿಳಿದಿತ್ತು ಎಂದು ನಮ್ಮೆಲ್ಲರಿಗೂ ತಿಳಿದಿದೆ, ಆದರೆ ನಿಸ್ವಾರ್ಥದಿಂದ ಇದನ್ನು ಆಲ್ಜೀಬ್ರಾ ಎಂದು ಕರೆಯಲು ಬಿಟ್ಟೆವು ಎಂದಿರುವ ಸಚಿವರು ಭಾರತೀಯರು ವಿಜ್ಞಾನವನ್ನು ಎಂದಿಗೂ ಋಣಾತ್ಮಕ ಕೆಲಸಗಳಿಗೆ ಬಳಸಿಲ್ಲ ಎಂದಿದ್ದಾರೆ.
ಅದು ಖಗೋಳ ಶಾಸ್ತ್ರವಗಲೀ, ವೈದ್ಯ ಶಾಸ್ತ್ರವಾಗಲಿ, ರಸಾಯನಶಾಸ್ತ್ರ, ಭೂಗರ್ಭ ಶಾಸ್ತ್ರವಾಗಲಿ, ನಿಸ್ವಾರ್ಥದಿಂದ ಎಲ್ಲ ಜ್ಞಾನವನ್ನೂ ಹಂಚಿಕೊಂಡಿದ್ದೇವೆ ಎಂದಿದ್ದಾರೆ.
ಕಳೆದ ವರ್ಷ ಪ್ರಧಾನಿ ಮೋದಿಯವರು ಪ್ರಾಚೀನ ಕಾಲದಲ್ಲಿ ಭಾರತ ವಿಜ್ಞಾನದ ವಿಷಯಗಳಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿತ್ತು ಎಂದಿದ್ದರು.