ನವದೆಹಲಿ : ದೆಹಲಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ತಿಳಿಸಿದ್ದಾರೆ.
ರಾಜೌರಿ ಗಾರ್ಡನ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು. ಇದರ ಅರಿವು ದೆಹಲಿ ಮತದಾರರಿಗೆದೆ. ಫೆ.10ರಂದು ನಿಮಗೆಲ್ಲ ಅಚ್ಚರಿ ಕಾದಿದೆ ಎಂದರು.
ಕಾಂಗ್ರೆಸ್ ಪಕ್ಷ ಯಾವುದೇ ಸಂದರ್ಭದಲ್ಲೂ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಲ್ಲ, ಆಪ್ ಬೆಂಬಲವನ್ನೂ ಪಡೆಯಲ್ಲ. ಕಾಂಗ್ರೆಸ್ ಚಿಲ್ಲರೆ ರಾಜಕೀಯದಲ್ಲಿ ತೊಡಗುವುದಿಲ್ಲ ಎಂದು ಹೇಳಿದ್ದಾರೆ.