ಮುಂಬೈ : ಮಹಾರಾಷ್ಟ್ರದ ನೂತನ ಸರ್ಕಾರದಿಂದ ಏನು ಬದಲಾವಣೆಯಾಗಿದೆ? ಈ ಬಗ್ಗೆ ಯಾರಿಗಾದರೂ ತಿಳಿದಿದ್ದರೆ ದಯವಿಟ್ಟು ತಿಳಿಸಿ ಎಂದು ಎನ್ ಡಿಎ ಮೈತ್ರಿಕೂಟದ ಶಿವಸೇನೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಶಿವಸೇನಾ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತನ್ನದೇ ಮೈತ್ರಿಕೂಟದ ಫಡ್ನವೀಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಕ್ಷ, ಕಮ್ಯೂನಿಷ್ಟ್ ಮುಖಂಡ, ಟೋಲ್ ವಿರೋಧಿ ಹೋರಾಟಗಾರ ಗೋವಿಂದ್ ಪಾನ್ಸಾರೆ ಹಂತಕರನ್ನು ಬಂಧಿಸುವಲ್ಲಿ ಫಡ್ನವೀಸ್ ಸರ್ಕಾರ ವಿಫಲವಾಗಿದೆ ಎಂದು ದೂರಿದೆ.
ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಯ ನಂತರದ ಪುನರಾವರ್ತನೆಯಾಗಿದೆ ಎಂದು ಹೇಳಿದೆ. ಮಹಾರಾಷ್ಟ್ರದಲ್ಲಿ ಸಿಎಂ ಮತ್ತು ಸರ್ಕಾರ ಮಾತ್ರ ಬದಲಾಗಿದೆ. ಆದರೆ ವ್ಯವಸ್ಥೆ ಹಾಗೆಯೇ ಮುಂದುವರಿದಿದೆ ಎಂದು ಗುಡುಗಿದೆ.