ಬೆಂಗಳೂರು : ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2 ವಾಹನಗಳನ್ನು ನಿಯೋಜಿಸಲಾಗಿತ್ತು. ಆದರೆ ಸರ್ಕಾರಿ ವಾಹನದಲ್ಲಿ ತೆರಳು ನಿರಾಕರಿಸಿದ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷದ ಮುಖಂಡ ರವಿಕೃಷ್ಣಾ ರೆಡ್ಡಿ ಅವರ ವಾಹನದಲ್ಲಿ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿದ್ದಾರೆ.
10 ದಿನಗಳ ಕಾಲ ನಡೆಯುವ ಚಿಕಿತ್ಸೆಯಲ್ಲಿ ಕೇಜ್ರಿವಾಲ್ ಡಯಾಬಿಟೀಸ್ ಗೂ ಔಷಧಿ ಪಡೆಯಲಿದ್ದಾರೆ. ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತಮ್ಮ ಪೋಷಕರ ಜೊತೆ ಆಗಮಿಸಿರುವ ಕೇಜ್ರಿವಾಲ್ ಪ್ರೀಮಿಯರ್ ಸೂಟ್ 'ನೆಸ್ಟ್' ನಲ್ಲಿ ಕಾಲ ಕಳೆಯಲಿದ್ದಾರೆ.
ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಕೆಮ್ಮಿಗೆ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ಗೆ ಸೂಚನೆ ನೀಡಿದ್ದರು.