ನವದೆಹಲಿ : 'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ ಬೆದರಿಕೆ ಕರೆ ಬರುತ್ತಿದೆ ಎಂದು ರಾಜೇಶ್ ಗರ್ಗ್ ತಿಳಿಸಿದ್ದಾರೆ.
ದೆಹಲಿ ಸಿ.ಎಂ ಕೇಜ್ರಿವಾಲ್ ವಿರುದ್ಧ ಆರೋಪ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಬೆದರಿಕೆ ಹಾಕಿದವರು ತಮಗೆ ಒತ್ತಾಯಿಸಿದ್ದಾರೆ ಎಂದು ರಾಜೇಶ್ ಗರ್ಗ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯಿಂದ ಬೆದರಿಕೆ ಬಂದಿದ್ದು, ದೂರವಾಣಿ ಸಂಖ್ಯೆ ಹಾಗೂ ಸಂಭಾಷಣೆಯ ವಿವರಗಳನ್ನು ಪೊಲೀಸರ ಕೈತಲುಪಿವೆ. ಆಮ್ ಆದ್ಮಿ ಪಕ್ಷದ ವಿರುದ್ಧ ತಿರುಗಿಬಿದ್ದಿರುವ ರಾಜೇಶ್ ಗರ್ಗ್, ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿಸಲು ಕೇಜ್ರಿವಾಲ್ ತಂತ್ರ ರೂಪಿಸಿದ್ದರು ಎಂದು ಅರೋಪಿಸಿದ್ದರು.