ನವದೆಹಲಿ : ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ.
ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ನೀಡುವಂತೆ ಕೋರಿ ದೆಹಲಿ ಸಾಕೇತ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿರುವ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಜೂನ್ 13ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಅಲ್ಲದೇ ಜಾಮೀನು ಅರ್ಜಿ ವಿಚಾರಣೆ ಜೂನ್ 16ಕ್ಕೆ ಮುಂದೂಡಿದೆ.
ಕಾನೂನು ಬಾಹಿರವಾಗಿ ಪದವಿ ಪಡೆದ ಆರೋಪದ ಹಿನ್ನೆಲೆಯಲ್ಲಿ ತೋಮರ್ ಅವರನ್ನು ಮಂಗಳವಾರ ದೆಹಲಿ ಪೊಲೀಸರು ಬಂಧಿಸಿದ್ದು, ಜೂನ್ 13ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.