ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ.
ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್ ಪಂಥ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಿ ಪ್ರಕರಣದ ಪೂರ್ಣ ತನಿಖೆಗೆ ಆದೇಶ ನೀಡಲಾಗಿದೆ.
ಸಿಸಿಬಿ (ಕೇಂದ್ರ ಅಪರಾಧವಿಭಾಗ)ಯ ಜಂಟಿ ಆಯುಕ್ತ ಚಂದ್ರಶೇಖರ್ ತನಿಖೆ ನಡೆಸುವಮುನ್ನ ಮರುಪರಿಶೀಲನೆ ನಡೆಸುವಂತೆ ಪತ್ರ ಬರೆದ ಬೆನ್ನಲ್ಲೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವಹಿಸುವಂತೆ ಸರ್ಕಾರಕ್ಕೆ ಲೋಕಾಯುಕ್ತ ಸಂಸ್ಥೆ ಪತ್ರ ಬರೆದಿತ್ತು.
ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಲೋಕಾಯುಕ್ತ ನ್ಯಾ. ವೈ. ಭಾಸ್ಕರ್ ರಾವ್ ಕ್ರಮಕ್ಕೆ ಉಪಲೋಕಾಯುಕ್ತ ಸುಭಾಷ್ ಬಿ.ಅಡಿ, ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ
ಸೇರಿದಂತೆ ರಾಜ್ಯದೆಲ್ಲೆಡೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೆ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್ ಮರು ಪರಿಶೀಲಿಸುವಂತೆ ಪತ್ರ ಬರೆದಿದ್ದರು.