ನವದೆಹಲಿ : ಸೋಮವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಾಗಿದೆ, ಭೂಸ್ವಾಧೀನ ಮಸೂದೆಯನ್ನು ಪ್ರತಿಪಕ್ಷಗಳು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಿ ಎಂದು ಆಗ್ರಹಿಸಿದರು.
ಸಂಸತ್ತಿನ ಸಮಯ ಬಹಳ ಮಹತ್ವವನ್ನು ಹೊಂದಿದೆ, ಇದನ್ನು ಎಲ್ಲಾ ವಿಷಯಗಳನ್ನು ಚರ್ಚಿಸಲು ಉಪಯೋಗಿಸಬಹುದು. ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬಿರುಸಿನ ಚರ್ಚೆ ನಡೆಯುವ ನಿರೀಕ್ಷೆ ಇದೆ. ಪ್ರತಿಪಕ್ಷಗಳ ವಾಗ್ದಾಳಿ ಎದುರಿಸಲು ಸಿದ್ದ ಎಂದು ಬಿಜೆಪಿ ಹೇಳಿದೆ. ಅದರೆ, ಕಾಂಗ್ರೆಸ್ ಹಗರಣಗಳಲ್ಲಿ ಸಿಲುಕಿಕೊಂಡಿರುವ ನಾಯಕರ ರಾಜೀನಾಮೆಗೆ ಒತ್ತಾಯ ಮುಂದುವರಿಸುವುದಾಗಿ ಹೇಳಿದೆ. ಒಟ್ಟಿನಲ್ಲಿ ಈ ವರ್ಷದ ಮುಂಗಾರು ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ವ್ಯಾಪಂ ಪ್ರಕರಣ ಸುಪ್ರೀಂ ಕೋರ್ಟ್ ನ ಅಧೀನದಲ್ಲಿದೆ. ಆದರೂ ಕಾಂಗ್ರೆಸ್ ಈ ವಿಷಯವನ್ನು ಚರ್ಚೆಗೆ ತಂದರೆ, ಕಾಂಗ್ರೆಸ್ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಅರ್ಥ ಎಂದು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಹೇಳಿದ್ದಾರೆ.