Untitled Document
Sign Up | Login    
Dynamic website and Portals
  
August 19, 2015

ಬೆಲೆ ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರಕಾರ ನಿರ್ಧಾರ

ಬೆಲೆ ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರಕಾರ ನಿರ್ಧಾರ

ನವದೆಹಲಿ : ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ.

ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್​ಎಎಫ್​ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಇದುವರೆಗೂ ಟೆಂಡರ್ ಕರೆಯದಿರುವ ಹಿನ್ನಲೆಯಲ್ಲಿ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ. ಹಾಗಾಗಿ ಆದಷ್ಟು ಬೇಗ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಎಂಎಂಟಿಸಿಗೆ ಕೃಷಿ ಸಚಿವಾಲಯ ಸೂಚಿಸಿದೆ.

ಈರುಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 80 ರೂ. ತಲುಪಿದ್ದು, ಇದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ಬೆಲೆ ಏರಿಕೆಯನ್ನು ವಿಪಕ್ಷಗಳು ಸರಕಾರವನ್ನು ಹಣಿಯಲು ರಾಜಕೀಯವಾಗಿ ಬಳಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಈರುಳ್ಳಿ ಆಮದಿಗೆ ಸರಕಾರ ನಿಶ್ಚಯಿಸಿದೆ. ಪಾಕಿಸ್ತಾನ, ಚೀನಾ ಹಾಗೂ ಈಜಿಪ್ಟ್ ದೇಶಗಳಿಂದ ಈರುಳ್ಳಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.

ಮುಂಗಾರು ವ್ಯತ್ಯಯದಿಂದ ದೇಶದಲ್ಲಿ ಈ ವರ್ಷ ಈರುಳ್ಳಿ ಉತ್ಪಾದನೆಯಲ್ಲಿ ಇಳಿಕೆಯಾಗುವ ಸಂಭವವಿದ್ದು, ಇದರಿಂದ ಬೆಲೆ ಏರಿಕೆ ಕಂಡಿದೆ ಎನ್ನಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited