ನವದೆಹಲಿ : ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ.
ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಹೆಚ್ಚಿನ ಆರ್ಥಿಕ ಬೆಳವಣಿಗೆ ಸಾಧಿಸಲು ಸುಧಾರಣೆಯ ಮಾರ್ಗದಲ್ಲಿರುವುದು ಮುಖ್ಯ. ಈಗಿನ ಜಾಗತಿಕ ಆರ್ಥಿಕ ಪರಿಸ್ಥಿತಿ ಭಾರತಕ್ಕೆ ಒಂದು ಅವಕಾಶ ಪ್ರಸ್ತುತಪಡಿಸಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದವರು ಕಳೆದ ಸಂಸತ್ತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೋಲಾಹಲ ಉಂಟುಮಾಡಿದ್ದರಿಂದ ರಾಜ್ಯಸಭೆಯಲ್ಲಿ ಜಿ ಎಸ್ ಟಿ ಗೆ ಅನುಮೋದನೆ ಸಿಕ್ಕಿರಲಿಲ್ಲ.
ಸ್ಟೀಲ್, ಶಕ್ತಿ, ವಿದ್ಯುತ್ ವಿತರಣಾ ಕಂಪನಿಗಳು ಮತ್ತು ಕಡಿಮೆ ಪ್ರಮಾಣದಲ್ಲಿ ಜವಳಿ ಉದ್ಯಮಗಳು ಒತ್ತಡದಲ್ಲಿರುವ ಪ್ರಮುಖ ವಲಯಗಳು ಎಂದು ಅರುಣ್ ಜೇಟ್ಲಿ ಹೇಳಿದರು.