ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ.
ಹಂದ್ವಾರಾದಲ್ಲಿನ ಹಾಫೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ ಭಾರತೀಯ ಯೋಧರು ತಕ್ಷಣ ಅಲ್ಲಿಗೆ ಧಾವಿಸಿ ಕಾರ್ಯಾಚರಣೆಗೆ ಮುಂದಾದರು. ಈ ಸಂದರ್ಭದಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಭಾರತೀಯ ಯೋಧರು ಮೃತಪಟ್ಟಿದ್ದಾರೆ.
ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರದಂದು ನಡೆದಿದ್ದ ಎನ್ಕೌಂಟ್ರ್ಗೆ ಇಬ್ಬರು ಜೈಶ್ ಎ ಮೊಹಮ್ಮದ್ ಉಗ್ರರು ಹತರಾಗಿದ್ದರು. ಅದೇ ಕಾದಾಟದಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದ. ಮೃತಪಟ್ಟ ಉಗ್ರರು ಪಾಕಿಸ್ತಾನದ ನಾಗರಿಕರು ಇನ್ನುವ ಶಂಕೆ ವ್ಯಕ್ತವಾಗಿದೆ.
ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಡಿಸೆಂಬರ್ 13, 2001 ರಲ್ಲಿ ನಡೆದ ಸಂಸತ್ತ್ ದಾಳಿ ಸೇರಿದಂತೆ ಜಮ್ಮು-ಕಾಶ್ಮೀರದಲ್ಲಿ ನಡೆದ ಬಹಳಷ್ಟು ದಾಳಿಯ ರುವಾರಿಯಾಗಿದೆ.