Untitled Document
Sign Up | Login    
Dynamic website and Portals
  
October 19, 2015

ದ್ವಿದಳ ಧಾನ್ಯ ಅಕ್ರಮ ಸಂಗ್ರಹ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ

ನವದೆಹಲಿ : ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ.

ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ ವಿರುದ್ಧ ಮತ್ತು ಬ್ಲ್ಯಾಕ್​ ನಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ದ್ವಿದಳ ಧಾನ್ಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಅಕ್ರಮ ಸಂಗ್ರಹಣೆ ತಡೆಯಲು ಕೇಂದ್ರ ಸರ್ಕಾರ ಆಮದುದಾರರು ಮತ್ತು ರಫ್ತುದಾರರ ಸಂಗ್ರಹದ ಮೇಲೆ ಮಿತಿ ಹೇರಲು, ಅವಶ್ಯಕ ವಸ್ತುಗಳ ಕಾಯ್ದೆ, 1955 ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ತಿದ್ದುಪಡಿ ತಂದಿದೆ ಎಂದು ಸಚಿವಾಲಯ ಹೇಳಿದೆ.

ಸಂಪುಟ ಕಾರ್ಯದರ್ಶಿ ಸಹ ಪ್ರತಿದಿನ ಬೆಲೆ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ. ಅವಶ್ಯಕ ವಸ್ತುಗಳ ಬೆಲೆಯ ಮೇಲೆ ಅವಶ್ಯಕವಾಗಿ ಬೇಳೆ ಕಾಳುಗಳ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರ ಜೊತೆ, ಬೆಲೆ ಏರಿಕೆ ತಡೆಯಲು ರಾಜ್ಯ ಸರ್ಕಾರದ ಜೊತೆ ನಿಕಟ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

ಅಕ್ರಮ ದಾಸ್ತಾನು ಮತ್ತು ಬ್ಲ್ಯಾಕ್​ ನಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ಕೆಲವು ತಿಂಗಳುಗಳಿಂದ ಬೇಳೆ-ಕಾಳುಗಳ ಬೆಲೆ ದ್ವಿಗುಣಗೊಂಡಿದೆ. ಮಳೆಯ ಕೊರತೆಯಿಂದಾಗಿ ಈ ವರ್ಷ ಬೇಳೆ-ಕಾಳುಗಳ ಉತ್ಪಾದನೆಯಲ್ಲಿ 20 ಲಕ್ಷ ಟನ್ ಕಡಿತವಾಗಿದ್ದು, 2014-15 ವರ್ಷದಲ್ಲಿ ಕೇವಲ 1 ಕೋಟಿ 70 ಲಕ್ಷ ಟನ್ ದ್ವಿದಳ ಧಾನ್ಯ ಉತ್ಪಾದನೆಯಾಗಿದೆ ಎಂದು ಆಹಾರ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ವರ್ಷ 85 ರೂ ಇದ್ದ ಒಂದು ಕೆ ಜಿ ತೊಗರಿಬೇಳೆ ಈ ವರ್ಷ 190 ರೂ ಗೆ ಏರಿಕೆಯಾಗಿದೆ.ಅದೇ ರೀತಿ ಉದ್ದಿನಬೇಳೆ ಸಹ 100 ರೂ ಇಂದ 190 ರೂ ಗೆ ಏರಿಕೆಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited