Untitled Document
Sign Up | Login    
Dynamic website and Portals
  
January 19, 2016

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾವಯವ ಮೇಳದ ವೀಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾವಯವ ಮೇಳದ ವೀಕ್ಷಣೆ

ನವದೆಹಲಿ : ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು.

ಕೊಕ್ರಝಾರ್ ಪ್ರದೇಶದಲ್ಲಿ ಸಭೆಯೊದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಲ್ಲಿಂದಲೇ ರಾಜ್ಯಸಭೆಗೆ ಆಯ್ಕೆಯಾದ್ದರಿಂದ ಈಶಾನ್ಯ ಭಾರತದಲ್ಲಿ ಯಾವುದೇ ಸಮಸ್ಯೆಗಳಿರುವುದಿಲ್ಲ ಎಂದು ನಾನು ತಿಳಿದುಕೊಂಡಿದ್ದೆ. ಜೊತೆಗೆ ಕಾಂಗ್ರೆಸ್ ಸರ್ಕಾರವೇ ಕಳೆದ 15 ವರ್ಷಗಳಿಂದ ಆಡಳಿತದಲ್ಲಿದೆ.ಇಲ್ಲಿಂದ ಆಯ್ಕೆ ಆದ ವ್ಯಕ್ತಿ ಪ್ರಧಾನಿಯಾಗಿ 10 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ ಎಂದರು. ಅವರು ೧೫ ವರ್ಷಗಳ ಕಾಲ ಕೆಲಸ ಮಾಡಲಿಲ್ಲ, ಆದರೆ ನಮ್ಮಿಂದ 15 ತಿಂಗಳಲ್ಲಿ ಎಲ್ಲಾ ಕೆಲಸ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಈ ವರ್ಷ ಅಸ್ಸಾಂವಿಧಾನಸಭೆಚುನಾವಣೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ ಪ್ರಧಾನಿ ಮೋದಿ ಅವರು ಗೊವಾಹಾಟಿಯಲ್ಲಿ ಯುವ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂ ಸಾವಯವ ಹಬ್ಬವನ್ನು ಉದ್ಘಾಟಿಸಿ, ಮೇಳದಲ್ಲಿದ್ದ ಮಳಿಗೆಗಳನ್ನು ವೀಕ್ಷಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited