Sullia : ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು, ಈಗ ಪ್ರಸ್ತುತ ಭಯೋತ್ಪಾದನೆಯ ಕರಿನೆರಳಿಗೆ ತುತ್ತಾಗಿದೆ. ಭಯೋತ್ಪಾದನೆಯ ವಿರುದ್ಧ ವಿದ್ಯಾರ್ಥಿಗಳು ಸಂಘಟಿತರಾಗಿ ಹೋರಾಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ದೇಶದ ಸಮಗ್ರತೆ ಮತ್ತು ಗೌರವದೊಂದಿಗೆ ಪ್ರಜಾಪ್ರಭುತ್ವವನ್ನು ಉಳಿಸುವುದು ಎಲ್ಲ ಭಾರತೀಯ ಪ್ರಜೆಗಳ ಆದ್ಯ ಕರ್ತ್ಯವ್ಯವಾಗಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ಎಲ್ಲರನ್ನು ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಸ್ವಾಗತಿಸಿ, ಶಿಕ್ಷಕ ಪ್ರಸನ್ನ ಐವರ್ನಾಡು ವಂದಿಸಿದರು.