BW News Bureau : ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.
ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿದ್ದು, ರಾಜರಾಜೇಶ್ವರಿ ನಗರದ ಮುನಿವೆಂಕಟಯ್ಯ ರಂಗಮಂದಿರದಲ್ಲಿ ಈ ಕಲಾ ಉತ್ಸವವು ನಡೆಯಲಿದೆ.
ನಾಡಿನ ಖ್ಯಾತ ಕವಿ-ಕಲಾವಿದರುಗಳು ಭಾಗವಹಿಸುತ್ತಿರುವ ಈ ಕಲಾ ಉತ್ಸವದಲ್ಲಿ ಪೂಜ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯವಹಿಸಿ ಆಶೀರ್ವಚನವನ್ನು ಅನುಗ್ರಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಕಲಾಶಿಬಿರ, ಚಿತ್ರಕಲಾ ಸ್ಪರ್ಧೆ, ಸುಗಮ ಸಂಗೀತ, ಚಿತ್ರಕಲಾ ಪ್ರದರ್ಶನ, ಯಕ್ಷಗಾನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.