ನವದೆಹಲಿ : ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್ರನ್ನು ಭೇಟಿ ಮಾಡಿ, ರಾಜ್ಯದಲ್ಲಿ ವಿದ್ಯುತ್ ಕೊರತೆಯನ್ನು ನೀಗಿಸಲು ಕೇಂದ್ರದ ಗ್ರಿಡ್ನಿಂದ ಕರ್ನಾಟಕಕ್ಕೆ 500 ಮೆಗಾ ವ್ಯಾಟ್ ವಿದ್ಯುತ್ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಸಂಸದರ ಮನವಿಗೆ ಗೋಯಲ್, ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಕೇಂದ್ರದ ಗ್ರಿಡ್ನಿಂದ ರಾಜ್ಯಕ್ಕೆ 319 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಹಂಚಿಕೆಗೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.