ನವದೆಹಲಿ : ಕೇಂದ್ರ ಎನ್ಡಿಎ ಸರ್ಕಾರದ ಎರಡನೇ ವರ್ಷಾಚರಣೆಯ ಸಾಧನಾ ಸಮಾವೇಶ ಸಂಭ್ರಮ ಇಂಡಿಯಾ ಗೇಟ್ ಆವರಣದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಜತೆ ಬಚ್ಚನ್ ಉಪಸ್ಥಿತಿ ವಿಶೇಷ ತಾರಾ ಮೆರುಗು ನೀಡಲಿದೆ. ಬಚ್ಚನ್ ಅವರಿಗೆ ಮೋದಿ ಈಗಾಗಲೇ ಅಧಿಕೃತ ಆಹ್ವಾನ ನೀಡಿದ್ದು, ಅವರು ಆಗಮಿಸಲು ಸಮ್ಮತಿಸಿದ್ದಾರೆ.
ಪ್ರಧಾನಿ ಮೋದಿಯವರ ಇಡೀ ಸಚಿವ ಸಂಪುಟ ಸಮಾರಂಭದಲ್ಲಿ ಭಾಗವಹಿಸಲಿದ್ದು, ಸಚಿವರು ಈ ಸಂದರ್ಭದಲ್ಲಿ ಸರ್ಕಾರದ ಸಾಧನೆ, ನೂತನ ಯೋಜನೆ, ಮುಂದಿನ ಗುರಿ ಇತ್ಯಾದಿ ಬಗ್ಗೆ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಂಜೆ 5 ರಿಂದ ರಾತ್ರಿ 10 ರ ವರೆಗೆ 5 ತಾಸು ನಡೆಯುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.‘ದೇಶ್ ಬದಲ್ ರಹಾ ಹೈ ’ ಎಂಬುದು ಇಡೀ ಕಾರ್ಯಕ್ರಮದ ಥೀಮ್ ಸಾಂಗ್ ಆಗಿ ಹೊರ ಹೊಮ್ಮಲಿದೆ.