Untitled Document
Sign Up | Login    
Dynamic website and Portals
  
May 31, 2016

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತೀಯ ಉದ್ಯಮಿಗಳು, ಸಂಶೋಧಕರು ಮುಖ್ಯ ಪಾತ್ರ ವಹಿಸಿದ್ದಾರೆ: ಸತ್ಯಾ ನಡೆಲ್ಲಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ

ನವದೆಹಲಿ : ಭಾರತೀಯ ಉದ್ಯಮಿಗಳು ಮತ್ತು ಸಂಶೋಧಕರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ಮೈಕ್ರೋಸಾಫ್ಟ್ ಡೆವಲಪರ್ ಸಭೆಯಲ್ಲಿ ಮಾತನಾಡಿ, ಭಾರತದ ಮೇಲೆ ಮೈಕ್ರೋಸಾಫ್ಟ್ ಗಮನ ಹರಿಸುತ್ತಿದ್ದು, ಭಾರತೀಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭಾರತೀಯರಿಗೆ ಅಗಾಧ ಸೃಜನಶೀಲತೆ ಇದೆ ಎಂದು ಹೇಳಿದ್ದಾರೆ.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಸತ್ಯ ನಡೆಲ್ಲಾ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.

ಇದೇ ವೇಳೆ ಟೆಲಿಕಾಂ ಸಚಿವ ರವಿಶಂಕರ್‌ ಪ್ರಸಾದ್‌, ವಿತ್ತ ಖಾತೆ ರಾಜ್ಯ ಸಚಿವ ಜಯಂತ್‌ ಸಿನ್ಹಾ ಅವರನ್ನೂ ಭೇಟಿಯಾಗಿ, 'ಡಿಜಿಟಲ್‌ ಇಂಡಿಯಾ' ಬಲ ಪಡಿಸುವ ಬಗ್ಗೆ, ಸರ್ಕಾರದ ಕ್ಲೌಡ್‌ ಸೇವೆಗೆ ಮೈಕ್ರೋಸಾಫ್ಟ್ ನ ವಿಡಿಯೋ ಮೆಸೆಂಜರ್‌ 'ಸ್ಕೈಪ್‌'ನೊಂದಿಗೆ ಆಧಾರ್‌ ಅನ್ನು ಜೋಡಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Science & Technology

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.
  • ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ
  • ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited