ಧಾರವಾಡ : ರಾಜ್ಯದ ಮೊದಲ ಐಐಟಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಜು.31ರಂದು ಧಾರವಾಡದಲ್ಲಿ ಚಾಲನೆ ನೀಡಲಿದ್ದಾರೆ.
ಧಾರವಾಡ ಹೈಕೋರ್ಟ್ ಸಮೀಪದಲ್ಲಿರುವ ವಾಲಿ¾ ಕಟ್ಟಡದಲ್ಲಿ ತಾತ್ಕಾಲಿಕ ಕ್ಯಾಂಪಸ್ ಕಾರ್ಯನಿರ್ವಹಿಸಲಿದೆ. ಆರಂಭದಲ್ಲಿ ಕಂಪ್ಯೂಟರ್ ವಿಜ್ಞಾನ, ಮೆಕಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯಗಳ ಅಧ್ಯಯನ ಈ ಕ್ಯಾಂಪಸ್ನಲ್ಲಿ ನಡೆಯಲಿದೆ.
ಆಗಸ್ಟ್ 1ರಿಂದ ತರಗತಿಗಳು ಆರಂಭವಾಗಲಿದ್ದು, 120ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಇದಕ್ಕಾಗಿ ಬೇಕಾದ ಸಿದ್ಧತೆಗಳನ್ನು ಜು.15ರೊಳಗೆ ಸಿದ್ಧಪಡಿಸಲು ಕೇಂದ್ರ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಅದರಂತೆ ಜಿಲ್ಲಾಡಳಿತ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ.