Untitled Document
Sign Up | Login    
Dynamic website and Portals
  
August 6, 2016

ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ: ರಾಘವೇಶ್ವರಶ್ರೀ

ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ: ರಾಘವೇಶ್ವರಶ್ರೀ

ಬೆಂಗಳೂರು : ಈ ದೇಶ ಸ್ವಾತಂತ್ರ್ಯ ಸಂಗ್ರಾಮಕ್ಕೆ ಎಷ್ಟು ಮಹತ್ವ ಕೊಟ್ಟಿತ್ತೊ ಅಷ್ಟೇ ಮಹತ್ವವನ್ನು ಗೋ-ರಕ್ಷಣಾ ಅಭಿಯಾನಕ್ಕೆ ಕೊಡಬೇಕು. ಈಗ ನಡೆಯುತ್ತಿರುವುದು ನಿಜವಾದ ಸ್ವಾತಂತ್ರ್ಯ ಸಂಗ್ರಾಮ, ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ. ದೇಶ ಭಾರತವಾಗಬೇಕಾದರೆ ಗೋ-ಹಿಂಸೆ ನಿಲ್ಲಬೇಕು, ಅಲ್ಲಿಯವರೆಗೂ ಇದು ಇಂಡಿಯಾ ಆಗೇ ಇರುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು.

ಬೆಂಗಳುರಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯಗೋಸಂದೇಶಸಭೆಯಲ್ಲಿ ಮಾತನಾಡಿ, ಯಾವ ಮನೆಯಲ್ಲಿ ಗೋವಿನ ಅಂಬಾಕಾರ ಇಲ್ಲವೋ ಅದು ಮನೆಯೇ ಅಲ್ಲ ಎಂದು ಬಲ್ಲವರು ಹೇಳುತ್ತಾರೆ. ಹಾಗಾಗಿ ಎಲ್ಲರ ಮನೆಯಲ್ಲೂ ಗೋವಿನ ಅಂಬಾಕಾರ ಕೇಳುವಂತಾಗಬೇಕು. ಇಂದು ನಡೆಯುತ್ತಿರುವ ಗೋವಿನ ಹಿಂಸೆ ನಿಲ್ಲಬೇಕು ಎಂದು ನುಡಿದರು.

ಬದುಕಿಗೆ ಸ್ಫೂರ್ತಿ ತುಂಬಿದ ತಾಯಿಯ ಫೋಟೋವನ್ನು ಮನೆಯ ಎಲ್ಲೆಡೆ ಹಾಕುತ್ತಾರೆ. ಹಾಗೆಯೇ ಬದುಕಿನುದ್ದಕ್ಕೂ ಹಾಲು ಕೊಟ್ಟು ನಮ್ಮನ್ನು ಪೊರೆಯುವ ಗೋವನ್ನು ನಮ್ಮ ಜೀವನದ ಎಲ್ಲ ಕ್ಷೇತ್ರದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ಗೋವನ್ನು, ಸಂತರನ್ನು ಎದೆಯೊಳಗಿಟ್ಟುಕೊಂಡರೆ ಸೋಲಿಲ್ಲ. ಗೋವಿನ ಜೊತೆಗಿರುವ ಎಲ್ಲರ ಬದುಕು ಸಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶ್ರೀರಂಗಪಟ್ಟಣ ಪಶ್ಚಿಮವಾಹಿನಿ, ಬೇಬಿಮಠ ಚಂದ್ರವನ ಆಶ್ರಮದ ಪೂಜ್ಯ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಗಳು ಮಾತನಾಡಿ, ಭಕ್ತರ ಅಭಿವೃದ್ಧಿಗೋಸ್ಕರ, ಗೋವಿನ ರಕ್ಷಣೆಗೋಸ್ಕರ ಪರಮಪೂಜ್ಯರು ಚಾತುರ್ಮಾಸ್ಯ ಮಾಡುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳಲ್ಲಿ ಜ್ಞಾನವನ್ನು ಸವಿಯಬೇಕು. ಭಗವಂತ ಎಲ್ಲವನ್ನು ಕೊಟ್ಟಿದ್ದಾನೆ, ಗುರು ಅದನ್ನು ನಮಗೆ ಪಡೆಯುವ ವಿಧಾನ ತೋರಿಸುತ್ತಾನೆ. ನಾವು ಯಾವಾಗಲೂ ಗುರು ಹಾಗೂ ಭಗವಂತನಿಗೆ ಕೃತಜ್ಞರಾಗಿರಬೇಕು ಎಂದರು.

ಅಪಘಾತಕ್ಕೊಳಗಾದ ಸಾವಿರಕ್ಕೂ ಹೆಚ್ಚು ಗೋವುಗಳನ್ನು ಉಳಿಸಿ, ಐನೂರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿದ ಪುರುಷೋತ್ತಮ ಸಾಗರ ಇವರಿಗೆ ಗೋ ಸೇವಾಪುರಸ್ಕಾರವನ್ನು ನೀಡಲಾಯಿತು.

ಶ್ರೀಭಾರತೀಪ್ರಕಾಶನ ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿಯನ್ನು ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಹಾಗೂ ರಮೇಶ್ ಹೆಗಡೆ ಗುಂಡೂಮನೆ ಬರೆದ ಯಕ್ಷರಂಜಿನಿ ಯಕ್ಷಗಾನ ಪ್ರಸಂಗ ಪುಸ್ತಕವನ್ನು ರಾಘವೇಶ್ವರಶ್ರೀಗಳು ಲೋಕಾರ್ಪಣೆ ಮಾಡಿದರು.

ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷ ಅನಂತಕೃಷ್ಣ ಭಟ್, ಪೀಣ್ಯ, ಕಾಮಾಕ್ಷಿಪಾಳ್ಯ ನಾಗರಭಾವಿ ಪ್ರದೇಶದ ಉದ್ಯಮಿಗಳು, ಸಮಾಜಸೇವಕ ಲಕ್ಷ್ಮೀನಾರಾಯಣ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಆವಿನಹಳ್ಳಿ, ಸಾಗರ ನಗರ ಪೂರ್ವ ಮತ್ತು ಪಶ್ಚಿಮ ವಲಯದವರು ಸರ್ವಸೇವೆಯನ್ನು ನೆರವೇರಿಸಿದರು. ಶ್ರೀಮಠದ ಪದಾಧಿಕಾರಿಗಳು, ಚಾತುರ್ಮಾಸ್ಯ ಸಮಿತಿಯ ಸದಸ್ಯರು ಇದ್ದರು. ವೆಂಕಟೇಶ್ ಜೋಯಿಸ್ ದಂಪತಿಗಳು ಸಭಾಪೂಜೆ ಮಾಡಿದರು. ಮೋಹನ ಭಾಸ್ಕರ ಹೆಗಡೆ ಮತ್ತು ಕಾರ್ತಿಕ ಭಟ್ ನಿರೂಪಿಸಿದರು.

ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited