Untitled Document
Sign Up | Login    
Dynamic website and Portals
  
August 23, 2016

ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ: ರಾಘವೇಶ್ವರಭಾರತೀಶ್ರೀ

ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ: ರಾಘವೇಶ್ವರಭಾರತೀಶ್ರೀ

ಬೆಂಗಳೂರು : ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀಗಳು, ತಾಯಿಗೆ – ಗೋವಿಗೆ – ಹಾಲಿಗೆ ಪರ್ಯಾಯವಿಲ್ಲ. ಹಾಲಿಗಾಗಿ ಹೋರಾಟವನ್ನು ಮಾಡಿ, ಹಾಲಲ್ಲದ್ದನ್ನು ಸ್ವೀಕರಿಸಬೇಡಿ. ಭಾರತ ತಾಯಿಯ ಮಕ್ಕಳಾದ ನಮಗೆಲ್ಲರಿಗೂ ಶುದ್ಧ ಹಸುವಿನ ಹಾಲು ಕುಡಿಯುವ ಹಕ್ಕಿದೆ. ಸಾಮೂಹಿಕ ಬೇಡಿಕೆ ಎದ್ದಾಗ ಪೂರೈಸುವ ವ್ಯವಸ್ಥೆ ತಾನಾಗಿಯೇ ಬೆಳೆಯುತ್ತದೆ. ಶ್ರೀಮಠದ ಪ್ರೇರಣೆಯಿಂದ ಬೆಂಗಳೂರಿನ ಸುತ್ತಮುತ್ತ, ಜನರ ಹೆಸರಿನಲ್ಲಿ ಗೋವನ್ನು ಸಾಕುವ ಹಾಗು ಅದರ ಹಾಲನ್ನು ಪೂರೈಸುವ ವ್ಯವಸ್ಥೆ ರೂಪುಗೊಂಡಿದೆ. ಇಂತಹ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದರು.

ಹಾಲಿಲ್ಲದ ಬದುಕು ಜೀವವಿಲ್ಲದ ಬದುಕು ಎಂದು ಆಯುರ್ವೇದ ಹೇಳುತ್ತದೆ, ಹಾಲು ಜೀವದ್ರವ ಎಂದಿರುವ ಆಯುರ್ವೇದ, ಹಾಲನ್ನು ಔಷಧಗಳ ಸಾರ ಎಂದು ಕೊಂಡಾಡಿದೆ. ದೇಶೀಯ ಗೋವು ಸೂರ್ಯಕೇತು ನಾಡಿಯ ಮುಖಾಂತರ ಸೂರ್ಯಕಿರಣವನ್ನು ಹೀರಿಕೊಂಡು ಸತ್ವಯುತವಾದ ಹಾಲನ್ನು ನೀಡುತ್ತದೆ. ಆಧುನಿಕ ವಿಜ್ಞಾನವೂ ದೇಶೀಯ ಹಾಲಿನ ಗುಣವನ್ನು ಒಪ್ಪುತ್ತದೆ ಎಂದು ಸಂಶೋಧನೆಗಳ ಸಾರವನ್ನು ಶ್ರೀಗಳು ಉಲ್ಲೇಖಿಸಿದರು.

ಚಾತುರ್ಮಾಸ್ಯದ ಸೀಮೋಲ್ಲಂಘನದ ನಂತರ ಕರ್ನಾಟಕ ಸೇರಿದಂತೆ ಸಪ್ತರಾಜ್ಯಗಳಲ್ಲಿ ಗೋಕಿಂಕರ ಯಾತ್ರೆ ಹಾಗೂ ಮಂಗಲ ಗೋ ಯಾತ್ರೆ ನಡೆಯಲಿದೆ. ಗೋವಿನ ಈ ಮಹಾಭಿಯಾನದಲ್ಲಿ ಎಲ್ಲರೂ ಭಾಗವಹಿಸಿ ಗೋಸಂರಕ್ಷಣಾ ಕಾರ್ಯದಲ್ಲಿ ಭಾಗಿಗಳಾಗಿ ಎಂದು ಜನತೆಗೆ ಕರೆನೀಡಿದರು.

ಅರಕಲಗೂಡು ವಿರಕ್ತಮಠದ ಸ್ವತಂತ್ರ ಬಸವಲಿಂಗ ಶಿವಯೋಗಿಗಳು ಸಂತಸಂದೇಶ ನೀಡಿ, ಗೋಹತ್ಯೆಯನ್ನು ಬೆಂಬಲಿಸುವವರು, ತಮ್ಮ ಮಾತೆಯನ್ನು ಹತ್ಯೆಮಾಡಲು ಬೆಂಬಲಿಸುತ್ತಾರೆಯೇ ಎಂಬ ಅವಲೋಕನವನ್ನು ಮಾಡಿಕೊಳ್ಳಬೇಕು, ಸಂತರನ್ನು ತುಳಿಯುವ ಕೆಲಸವಾಗುತ್ತಿದ್ದು, ಎಲ್ಲಾ ಸಂತರು ಒಟ್ಟಗಬೇಕು ಎಂಬ ಕರೆಯನ್ನು ನೀಡಿದರು. ಅರಕಲುಗೂಡಿನ ತಮ್ಮ ಮಠದಲ್ಲೂ ಗೋಶಾಲೆಯನ್ನು ಸಧ್ಯದಲ್ಲಿಯೇ ಆರಂಭಿಸಲಿದ್ದು, ಆ ಗೋಶಾಲೆಗೆ ಪ್ರಥಮ ಗೋವನ್ನು ಶ್ರೀರಾಮಚಂದ್ರಾಪುರಮಠದಿಂದ ಅನುಗ್ರಹಿಸಬೇಕು ಎಂದು ನಿವೇದಿಸಿಕೊಂಡರು. ಮ.ನಿ.ಪ್ರ ಶ್ರೀ ಸಂಗಮೇಶ್ವರ ಮಹಾಸ್ವಾಮಿಗಳು, ಜವೇನಹಳ್ಳಿ ಮಠ, ಹಾಸನ ಇವರು ಸಾನ್ನಿಧ್ಯವನ್ನು ಕರುಣಿಸಿದ್ದರು.

ಹೊರನಾಡಿನ ಧರ್ಮಕರ್ತರಾದ ಶ್ರೀಭೀಮೇಶ್ವರಜೋಷಿ ದಂಪತಿಗಳಿಗೆ ಹಾಗೂ ಬೆಂಗಳೂರು ನಗರದಲ್ಲಿ ದೇಶಿಯ ಹಸುವಿನ ಸಾಕಾಣೆಯಲ್ಲಿ ತೊಡಗಿಸಿಕೊಂಡಿರುವ ರಘು ಅವರುಗಳಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಗೋಸೇವಾ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಶ್ರೀಭೀಮೇಶ್ವರಜೋಷಿ ಅವರು, ಗೋವೂ ಕೂಡ ಅನ್ನಪೂರ್ಣೇಶ್ವರಿಯ ಒಂದು ಸ್ವರೂಪವಾಗಿದ್ದು, ಹೊರನಾಡಿನಲ್ಲಿ ಗೋಸಾಕಾಣೆ ಮಾಡಲಾಗುತ್ತಿದೆ ಎಂದರು. ಶ್ರೀಭಾರತೀಪ್ರಕಾಶನವು ಹೊರತಂದ ಗೋಕಥಾ ದೃಶ್ಯಮುದ್ರಿಕೆ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯಮುದ್ರಿಕೆಯನ್ನು ಶ್ರೀಗಳು ಲೋಕಾರ್ಪಣೆ ಮಾಡಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ರಮೇಶ್ಚಂದ್ರ ಸಂಗಡಿಗರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಮಂಗಳೂರು ಉತ್ತರ, ಉಡುಪಿ ಹಾಗೂ ಕಾರ್ಕಳ ವಲಯದವರಿಂದ ಸರ್ವಸೇವೆ ನೆರವೆರಿತು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited