Untitled Document
Sign Up | Login    
Dynamic website and Portals
  
September 23, 2016

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಬೆಂಗಳೂರು : ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ನೆಲ, ಜಲ, ಭಾಷೆ ಹಾಗೂ ರಾಜ್ಯದ ಜನರ ಹಿತ ಕಾಪಾಡುವಲ್ಲಿ ಪಕ್ಷಭೇದ ಮರೆತು ಒಗ್ಗಟ್ಟು ಪ್ರದರ್ಶಿಸಲಾಯಿತು. ಪ್ರಸಕ್ತ 2016-17ನೇ ವರ್ಷವನ್ನು ಜಲಸಂಕಷ್ಟ ವರ್ಷ ಎಂದು ಪರಿಗಣಿಸಲಾಗಿದ್ದು, ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳಲ್ಲಿರುವ ಸುಮಾರು 27.5 ಟಿಎಂಸಿ ನೀರನ್ನು ಕೇವಲ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಬಳಸಿಕೊಳ್ಳಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

ಕೆಆರ್ ಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳಲ್ಲಿನ ನೀರನ್ನು ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ಪಟ್ಟಣಗಳ ಕುಡಿಯುವ ನೀರಿನ ಯೋಜನೆಗಾಗಿ ಬಳಸಿಕೊಳ್ಳಬೇಕು. ಬೇರೆ ಯಾವುದೇ ಕಾರಣಕ್ಕೂ ಈ ನೀರನ್ನು ಒದಗಿಸಲು ಸಾಧ್ಯವಿಲ್ಲ ಎಂದು ಕಲಾಪದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ವಿಧಾನಸಭೆ ಕಲಾಪದಲ್ಲಿ ಕನ್ನಡ ನಿರ್ಣಯ ಪ್ರತಿಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ವೈ.ಎಸ್.ವಿ.ದತ್ತ ಮಂಡಿಸಿದರು. ಇಂಗ್ಲಿಷ್ ನಿರ್ಣಯವನ್ನು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಂಡಿಸಿದರು. ಜಗದೀಶ್ ಶೆಟ್ಟರ್ ಮಾತನಾಡಿ, ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಜನರ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸುವ ಅಗತ್ಯವಿದೆ. ಇದು ಇಡೀ ದೇಶದ ಗಮನ ಸೆಳೆದಿರುವುದರಿಂದ ಇಂಗ್ಲಿಷ್‍ನಲ್ಲಿ ನಿರ್ಣಯವನ್ನು ಮಂಡಿಸುತ್ತಿದ್ದೇನೆ ಎಂದು ಹೇಳಿದರು.

ಈ ನಿರ್ಣಯವನ್ನು ಇಡೀ ಸದನ ಸರ್ವಾನುಮತದಿಂದ ಮೇಜು ಕುಟ್ಟಿ ಸ್ವಾಗತಿಸುವಮೂಲಕ ಅಂಗಿಕರಿಸಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited