ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.
ಪತಿ ನಟರಾಜನ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಶಶಿಕಲಾರಿಗೆ ಪೆರೋಲ್ ಮಂಜೂರು ಮಾಡಲಾಗಿದ್ದು, ಪತಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಲು ಅವಕಾಶ ನೀಡಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ಷರತ್ತುಗಳ ಮೇಲೆ ಶಶಿಕಲಾ ಅವರಿಗೆ ಪೆರೋಲ್ ನೀಡಲಾಗಿದೆ ಎಂದು ಶಶಿಕಲಾ ಪರ ವಕೀಲ ಕೃಷ್ಣಪ್ಪನ್ ತಿಳಿಸಿದ್ದಾರೆ. ರಾಜಕೀಯ ಸಭೆ ಮಾಡುವಂತಿಲ್ಲ, ರಾಜಕೀಯ ಮುಖಂಡರನ್ನು ಭೇಟಿಯಾಗುವಂತಿಲ್ಲ, ಅಧಿಕಾರಿಗಳೊಂದಿಗೆ ಸಭೆ ನಡೆಸುವಂತಿಲ್ಲ ಸೇರಿದಂತೆ 18 ಷರತ್ತುಗಳನ್ನು ವಿಧಿಸಿ ಶಶಿಕಲಾ ಅವರಿಗೆ ಅಧಿಕಾರಿಗಳು ಪೆರೋಲ್ ಮಂಜೂರು ಮಾಡಿದ್ದಾರೆ.