ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ನ್ನು ವಿಲೀನಗೊಳಿಸುವ ನೂತನ ಸಂಪ್ರದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.
ಈ ಮೂಲಕ ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ ಒಂಭತ್ತು ದಶಕಗಳ ಹಳೇ ಸಂಪ್ರದಾಯಕ್ಕೆ ತೆರೆಬಿದ್ದಿದೆ. ಕೇಂದ್ರ...
ಮುಂದಿನ ಆರ್ಥಿಕ ವರ್ಷದಿಂದ ಪ್ರತ್ಯೇಕ ರೈಲ್ವೆ ಮುಂಗಡ ಪತ್ರ ಮಂಡಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ 92 ವರ್ಷಗಳ ಇತಿಹಾಸವಿರುವ ಭಾರತದ ರೈಲ್ವೇ ಬಜೆಟ್ಗೆ 2017ರಿಂದ ತೆರೆಬೀಳಲಿದೆ.
ರೈಲ್ವೆ ಮುಂಗಡ ಪತ್ರವನ್ನು ಸಾಮಾನ್ಯ ಮುಂಗಡಪತ್ರದೊಂದಿಗೆ ಸೇರಿಸುವಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್...
ಗುರುವಾರ 2016 ರ ರೈಲ್ವೆ ಬಜೆಟ್ ಮಂಡಿಸಿದ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್, ಪ್ರಯಾಣಿಕರ ಪ್ರಯಾಣ ದರವನ್ನು ಹೆಚ್ಚಿಸದೇ ತಮ್ಮ ಎರಡನೇ ರೈಲ್ವೆ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. 3 ಸೂಪರ್ ಫಾಸ್ಟ್ ರೈಲ್ ಅನ್ನು ಘೋಷಿಸಿದರು. ಅದರ...
ಮುಂದಿನ 45 ದಿನಗಳಲ್ಲಿ ಕಾರ್ಪೋರೇಟ್ ಗಳಿಗೆ ನೀಡುತ್ತಿರುವ ತೆರಿಗೆ ವಿನಾಯ್ತಿಗಳನ್ನು ರದ್ದು ಪಡಿಸುವ ಮಾರ್ಗಸೂಚಿಯನ್ನು ಬಹಿರಂಗ ಪಡಿಸಲಾಗುವುದೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಶಕ್ತಿಕಂಟದಾಸ್ ಬುಧವಾರ ತಿಳಿಸಿದ್ದಾರೆ.
4 ವರ್ಷಗಳಲ್ಲಿ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಂದಿನ...
'ಪೆಟ್ರೋಲ್', ಡೀಸೆಲ್ ದರ ಮತ್ತೆ ಇಳಿಕೆಯಾಗಿದೆ. ಕಳೆದ ತಿಂಗಳಲ್ಲಿ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗಿತ್ತು. ಈ ಬಾರಿಯೂ ಅಲ್ಪ ಪ್ರಮಾಣದ ದರ ಇಳಿಕೆ ಕಂಡುಬಂದಿದೆ.
ಪ್ರತಿ ಲೀಟರ್ ಪೆಟ್ರೋಲ್, ದರದಲ್ಲಿ 49 ಪೈಸೆ ಇಳಿಕೆಯಾಗಿದ್ದರೆ ಡೀಸೆಲ್ ದರದಲ್ಲಿ 1.21ರೂ ಇಳಿಕೆಯಾಗಿದೆ. ಪರಿಷ್ಕೃತ...
ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...
ನಾಲ್ಕು ತಿಂಗಳು ಮುಂಚಿತವಾಗಿಯೇ ರೈಲು ಟಿಕೆಟ್ ಕಾದಿರಿಸುವ ವ್ಯವಸ್ಥೆಯನ್ನು ಎ.1ರಿಂದ ಜಾರಿಗೆ ತರಲು ರೈಲ್ವೇ ಇಲಾಖೆ ಸಜ್ಜಾಗುತ್ತಿದೆ.
ಈ ಕುರಿತು ಕಳೆದ ತಿಂಗಳು ಮಂಡಿಸಿದ ಆಯವ್ಯಯದಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಪ್ರಸ್ತಾಪಿಸಿದ್ದರು. ಸದ್ಯ 60 ದಿನ ಮುಂಚಿತವಾಗಿ ಟಿಕೆಟ್ ಕಾದಿರಿಸುವ...
'ಹಣಕಾಸು ಬಜೆಟ್' ಗೂ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಪೂರ್ವಭಾವಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಸಮೀಕ್ಷೆ ಪ್ರಕಾರ 2015-16ನೇ ಸಾಲಿನಲ್ಲಿ ಶೇ.8ಕ್ಕಿಂತ ಹೆಚ್ಚು ಜಿಡಿಪಿ ಬೆಳವಣಿಗೆಯಾಗಲಿದೆ ಎಂದು ತಿಳಿಸಿದ್ದಾರೆ.
ಹಣದುಬ್ಬರ ದರ...
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕ್ಷಮೆಯಾಚಿಸುವಂತೆ ವಿರೋಧಪಕ್ಷಗಳು ಪಟ್ಟು ಹಿಡಿದಿದ್ದು, ಕ್ಷಮೆ ಯಾಚಿಸದೇ ಇದ್ದರೆ ರೈಲ್ವೆ ಬಜೆಟ್ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿವೆ.
ವಿರೋಧ ಪಕ್ಷಗಳು ಸದನ ಹಾಳುಮಾಡುವ ಮನಸ್ಥಿತಿಯನ್ನು ಹೊಂದಿವೆ ಎಂದು ವೆಂಕಯ್ಯ ನಾಯ್ಡು...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ ರೈಲ್ವೆ ಬಜೆಟ್ ಮಧ್ಯಾಹ್ನ 12ಕ್ಕೆ ಮಂಡನೆಯಾಗಲಿದೆ.
ರೈಲ್ವೆ ಮಂತ್ರಿ ಸುರೇಶ್ ಪ್ರಭು ಅವರ ಚೊಚ್ಚಲ ರೈಲ್ವೆ ಮುಂಗಡಪತ್ರ ಇದಾಗಿದ್ದು, ಪ್ರಯಾಣ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ 2015-16ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನ್ನು ಸಚಿವ ಸುರೇಶ್ ಪ್ರಭು ಮಂಡಿಸಿದರು.
ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ರೈಲ್ವೆ ಮುಂಗಡಪತ್ರ ಮಂಡಿಸಿದ ಕೇಂದ್ರ ರೈಲ್ವೆ...
ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಿರುವ ಎನ್.ಡಿ.ಎ ಸರ್ಕಾರದ ಪೂರ್ಣಾವಧಿ ರೈಲ್ವೆ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ಕನಸಿನ ಬಜೆಟ್ ಎಂದು ಟೀಕಿಸಿದ್ದಾರೆ.
ಬಜೆಟ್ ನಲ್ಲಿ ಘೋಷಿಸಲಾಗಿರುವ ಯಾವುದೇ ಅಂಶಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ...
ಫೆ.26ರಂದು ಸಚಿವ ಸುರೇಶ್ ಪ್ರಭು ಅವರು ಮಂಡಿಸಲಿರುವ ರೈಲ್ವೆ ಬಜೆಟ್, ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ರೈಲ್ವೆ ಬಜೆಟ್ ಆಗಲಿದೆಯೇ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಮೂಲಗಳ ಪ್ರಕಾರ, ರೈಲ್ವೆ ಬಜೆಟ್ ನ್ನು ಸಾಮಾನ್ಯ ಬಜೆಟ್ ನೊಳಗೆ ಅಡಕಗೊಳಿಸುವ ಕುರಿತು...
ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಕಳೆದ ಬಜೆಟ್ನಲ್ಲಿ ನಿಗದಿ...
ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ.
ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...
ಶ್ರೀಮಂತರಿಗೆ ಸಿಗುವ ಅಡುಗೆ ಅನಿಲ ಸಬ್ಸಿಡಿಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಸರ್ಕಾರದ ಬೊಕ್ಕಸ ಭರ್ತಿಮಾಡಲು ಮುಂದಾಗಿದೆ.
ಸಬ್ಸಿಡಿ ಪಡೆಯಲು ಇರುವ ಮಾನದಂಡವನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡುವ ಸಾಧ್ಯತೆ ಇದ್ದು, ಫೆ.28ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ ವಿತ್ತ...