ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ನಡುವೆ ಸತತ 4 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದಿದ್ದಾಳೆ.
ಈಜೀಪುರದಲ್ಲಿ ಇಂದು ಬೆಳಿಗ್ಗೆ ಅಡುಗೆಮನೆಯಲ್ಲಿ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
ರಾಜಕಾಲುವೆಯಲ್ಲಿ ಮೂವರು ಕೊಚ್ಚಿ ಹೋಗಿದ್ದು, ಗೋಡೆ ಕುಸಿತದಿಂದ ದಂಪತಿ ಮೃತಪಟ್ಟಿದ್ದಾರೆ.ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೀದರ್,...
ಬೆಂಗಳೂರು: 2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಅನ್ನು ಸಂಪೂರ್ಣವಾಗಿ...
ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.
ನಗರದ ರಸ್ತೆ ಗುಂಡಿಗಳನ್ನು 10...
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಕುಂಭದ್ರೋಣ ಮಳೆಗೆ ಎಂಟು ಜನರು ಬಲಿಯಾಗಿದ್ದಾರೆ. ವರುಣನ ಆರಭ್ಹಟಕ್ಕೆ ಸಂಭವಿಸಿದ ವಿವಿಧ ಅವಘಡಗಳಲ್ಲಿ ಹಾಗೂ ಸಿಡಿಲು ಬಡಿದು ಒಟ್ಟು 8 ಮಂದಿ ಸಾವಿಗೀಡಾಗಿದ್ದರೆ ನಾಲ್ವರೂ ಗಂಭೀರ ಗಾಯಗೊಂಡಿದ್ದಾರೆ.
ಇನ್ನೂ ಎರಡು-ಮೂರು ದಿನಗಳ ಕಾಲ ಇದೇ ರೀತಿಯಲ್ಲೇ ಮಳೆ...
ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್ಎಸ್ಆರ್ ಬಡಾವಣೆ, ಶಾಂತಿನಗರ ಸೇರಿದಂತೆ...
ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಗಾಗಿ 14 ಅರೆಸೇನಾ ಪಡೆಗಳನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಬಿಎಸ್ಎಫ್,...
ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ.
ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...
ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು.
ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ...
ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...
ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು ಸೇರಿದಂತೆ 9 ನಗರಗಳನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ.
9 ನಗರಗಳು ಹೊಸದಾಗಿ ಸೇರ್ಪಡೆಯಾಗುವ ಮೂಲಕ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿರುವ ನಗರಗಳ ಸಂಖ್ಯೆ 100 ರಿಂದ 109 ಕ್ಕೆ ಏರಿಕೆಯಾಗಲಿದೆ.
ಈ...
ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈಗ ತನ್ನ ನಿಲುವನ್ನು ಬದಲಿಸಿದ್ದು, ರಾಜ್ಯದ ರಾಜಧಾನಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವಕಾಶ ನೀಡಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ರೂಪಿಸಲಾಗಿದ್ದ ನಿಯಮಗಳಿಗೆ ಒಳಪಡಲು ಬೆಂಗಳೂರು ವಿಫಲ ವಾಗಿದ್ದರಿಂದ ರಾಜ್ಯ...
ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು. ಹುಣ್ಣಿಮೆಯ ಬೆಳದಿಂಗಳಲ್ಲಿ, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತ ಜನ ಸಮೂಹದ ಗೋವಿಂದ..ಗೋವಿಂದ..ಎಂಬ ನಾಮಸ್ಮರಣೆಯೊಂದಿಗೆ ಧನ್ಯತಾ ಭಾವ ಮೆರೆದರು.
ಧರ್ಮರಾಯಸ್ವಾಮಿ ದೇವಾಲಯದಿಂದ ಮಲ್ಲಿಗೆ ಹೂವಿಂದ ಮೈದಳೆದ ಕರಗ ಮಹೋತ್ಸವ.. ಮಧ್ಯರಾತ್ರಿ 1.45ರ...
ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.
ತಿಗಳರ ಜನಾಂಗದ...
ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....
ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ.
ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಒಟ್ಟು 197 ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿದ್ದು, 6,759 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 198 ವಾರ್ಡ್ಗಳ ಪೈಕಿ ಹೊಂಗಸಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ, ಶನಿವಾರ 197...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತದಾನ 5 ಗಂಟೆಗೆ ಮುಕ್ತಾಯಗೊಂಡಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸುಮಾರು 3 ಗಂಟೆಯ ಸಮಯದಲ್ಲಿ ಕೇವಲ ಶೇ. 30 ರಷ್ಟು ಮತದಾನವಾಗಿದ್ದು, 21 ಲಕ್ಷ 99 ಸಾವಿರದಷ್ಟು ಮಂದಿ ಮತದಾನ ಮಾಡಿದ್ದರು. ಹೆಚ್ಚಾಗಿ ಯಾವುದೇ...
ಸುಪ್ರೀಂಕೋರ್ಟ್ ಮುಖ್ಯನ್ಯಾಯಾಪೀಠ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಲು ಆದೇಶ ನೀಡಿದೆ.
ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್, ಬಿಬಿಎಂಪಿ...
ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....
ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ 4.25ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ...
ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ...
ಅಬ್ಬಿಗೆರೆ, ಎಸ್.ಆರ್.ಎಸ್ ಪೀಣ್ಯ, ಪ್ಲಾಟಿನಂ ಸಿಟಿ ಸೇರಿದಂತೆ ಕೆಲವೆಡೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮೇ 11ರಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಸ್ಎನ್ಆರ್, ಆಸ್ಕರ್ ಉದ್ಯೋಗ, ಕೃಷ್ಣ ಡೈಮಂಡ್, ಬಿಟಿ ಪುರ, ಬಿ.ಬಿ....
ಸತತ 24 ಗಂಟೆಗೆ ಅರ್ಧಕ್ಕರ್ಧ ಬೆಂಗಳೂರು ಕತ್ತಲೆಯಲ್ಲಿ ಮುಳುಗಲಿದೆ.. ಹೌದು ಶುಕ್ರವಾರ ರಾತ್ರಿ 10ರಿಂದ ಶನಿವಾರ ರಾತ್ರಿ 10ರವರೆಗೆ ನಗರದ ಬಹುತೇಕ ಎಲ್ಲ ಪ್ರಮುಖ ಪ್ರದೇಶಗಳ ಆಯ್ದ ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಹಾಗಾಗಿ, ಇದರ ಬಿಸಿ ಬಹುತೇಕ ಆಸ್ಪತ್ರೆಗಳು, ವಾಣಿಜ್ಯ-ಉದ್ಯಮಗಳು...
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಬಗ್ಗೆ ಭಾರತ ಇತರ ದೇಶಗಳನ್ನು ಮುನ್ನಡೆಸುವಂತಾಗಬೇಕೆಂದು ಕರೆ ನೀಡಿದ್ದರು. ಆದರೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ.
ಇತರ ರಾಜಧಾನಿಗಳನ್ನು ಹಿಂದಿಕ್ಕಿರುವ ಬೆಂಗಳೂರು ದೇಶದಲ್ಲೇ ನಂ.1...
ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...
ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...
ಅದು ಹಲವು ವರ್ಷಗಳ ಕನಸು. ಕೊನೆಗೂ ನನಸಾಯಿತು. ತಮ್ಮ ಕಾರ್ಯಾಲಯದಲ್ಲಿ ಆ ದಿವ್ಯ ಪಾದಾರವಿಂದಗಳು ಒಮ್ಮೆಯಾದರೂ ಅಡಿ ಇಡಲಿ ಎಂಬ ಹೆಬ್ಬಯಕೆ ನನಸಾಗುವುದನ್ನು ಇಡೀ ತಂಡ ಬೆಳಿಗ್ಗೆಯಿಂದಲೇ ಕಾಯುತ್ತಿತ್ತು.
ಹೌದು, ಮಾ.12ರಂದು ಬೆಂಗಳೂರು ವೇವ್ಸ್ ಅಂತರ್ಜಾಲ ಪತ್ರಿಕೆ/ ರಿಷಿ ಸಿಸ್ಟಮ್ಸ್ ಕಚೇರಿಗೆ ಗೋಕರ್ಣ...
ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್ಸ್ಟ್ರೀಟ್ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ...
'ಬಿಜೆಪಿ' ಸದಸ್ಯತ್ವ ರಾಜ್ಯದಲ್ಲಿ 50 ಲಕ್ಷ ದಾಟಿದೆ. ಈ ವರೆಗೂ ರಾಜ್ಯಾದ್ಯಂತ 52,50,064 ಜನರು ಬಿಜೆಪಿ ಸದಸ್ಯರಾಗಿದ್ದು, ಸದಸ್ಯತ್ವ ನೋಂದಣಿ ಚುರುಕುಪಡೆದಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಭೇಟೀ ನೀಡಿದ್ದ ಸಂದರ್ಭದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಚುರುಕುಗೊಳಿಸುವಂತೆ ರಾಜ್ಯ...
ಮಹಾಶಿವರಾತ್ರಿ ಆಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧಗೊಂಡಿದೆ. ನಗರದ ಹಲವು ಭಾಗಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಹೋಮ-ಹವನಗಳನ್ನು ನಡೆಸಲಾಗುತ್ತದೆ.
ಶಿವರಾತ್ರಿ ಅಂಗವಾಗಿ ಈ ವರ್ಷ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವನ ದೇವಾಯಲಯದಲ್ಲಿ ಮಹಾಯಜ್ನ...
'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...
ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಬೇಕಿದ್ದ ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳಿಗೆ ವೀಸಾ ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಫೆ.4ರಿಂದ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಗಳ 27ನೇ ರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳು...
ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವಿಣ್ ತೊಗಾಡಿಯಾಗೆ ಬೆಂಗಳೂರಿಗೆ ಬರದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಪ್ರಚೋದನಕಾರಿ ಭಾಷಣ ಆರೋಪ ಶಂಕೆ ಹಿನ್ನಲೆಯಲ್ಲಿ ಫೆ.5 ರಿಂದ 1೦ರ ವರೆಗೆ ತೊಗಾಡಿಯಾ ಬೆಂಗಳೂರು ನಗರಕ್ಕೆ ಬರದಂತೆ ನಿಷೇಧ ಹೇರಿ ನಗರ...
ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ.
ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು...
ಬೆಂಗಳೂರಿನಲ್ಲಿ ಬೋಡೋ ಉಗ್ರರನ ಬಂಧನ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಬಂಧಿತ ಉಗ್ರ ಅಸ್ಸಾಂನಲ್ಲಿ ಬೋಡೋ ಉಗ್ರ ಸಂಘಟನೆ ಕಮಾಂಡರ್ ಆಗಿದ್ದಾನೆ ಎಂದು ತಿಳಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ...
ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ . ದೆಹಲಿ ಮಾದರಿಯಲ್ಲಿ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಆಮ್ ಆದ್ಮಿ ಪಾರ್ಟಿ ಘಟಕದಿಂದ ಈಗಾಗಲೇ ತಯಾರಿ ನಡೆದಿದ್ದು, ಜನರ ಅಹವಾಲು ಸ್ವೀಕರಿಸಲು...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸುತ್ತಿದ್ದೇವೆ. ಇದಕ್ಕೆ ರೂಪುರೇಷೆ ಸಿದ್ಧಪಡಿಸಲೆಂದು ಆಗಮಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಹೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ....
ಇತ್ತೀಚೆಗೆ ಚರ್ಚ್ ರಸ್ತೆಯ ಕೋಕನಟ್ ಗ್ರೋವ್ ಹೊಟೇಲ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ...
ಬೆಂಗಳೂರು ನಗರದಲ್ಲಿ ನೂತನ ವರ್ಷಾಚರಣೆ ಕಣ್ಗಾವಲಿಗಾಗಿ ಮೊದಲ ಬಾರಿಗೆ ಡ್ರೋನ್ ಏರಿಯಲ್ ಕ್ಯಾಮೆರಾ ಬಳಸಲಾಗುತ್ತಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಈ ಕ್ಯಾಮೆರಾ ಬಳಸಲಾಗುತ್ತಿದೆ ಎಂದು ಕೇಂದ್ರ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರಿಮೋಟ್ ನಿಯಂತ್ರಿತ ಈ ಏರಿಯಲ್ ಕ್ಯಾಮೆರಾಗಳು 50 ಅಡಿ...
'ಹೊಸ ವರ್ಷಾಚರಣೆ' ವೇಳೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನದಿಂದ ದೆಹಲಿಗೆ 10 ಉಗ್ರರು ನುಸುಳಿದ್ದು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ....
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ.
ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ...
ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಬೈ, ಪುಣೆ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್ ಸೇರಿದಂತೆ ದೇಶದಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ದಾಳಿಯ ನಂತರ ಮುಂಬೈ ಅನ್ನು ಉಗ್ರರು ಗುರಿಯಾಗಿರಿಸಿಕೊಂಡಿದ್ದಾರೆ. ಸಿಮಿ ಉಗ್ರ ಸಂಘಟನೆ ಮುಂಬೈ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಎಂ.ಜಿ.ರಸ್ತೆ ಬಳಿಯ ಜನನಿಭಿಡ ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟವಾಗಿದ್ದು, ಐಇಡಿ ಬಾಂಬ್ ಬಳಸಿ ಸ್ಫೋಟಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ...
ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಂಟಲಿಜನ್ಸ್ ಬ್ಯೂರೋ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಾಂಬ್ ಸ್ಫೋಟ...
ನಗರದಲ್ಲಿ ನಡೆದಿರುವ ಬಾಂಬ್ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್ಸ್ಟ್ರೀಟ್ನಲ್ಲಿ ರಾತ್ರಿ ಬಾಂಬ್ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು...
ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ನಿಷೇಧಿತ ಉಗ್ರ ಸಂಘಟನೆ ಅಲ್-ಉಮಾ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.
ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ತಮಿಳುನಾಡಿನ ಹೊಸೂರು, ಕೃಷ್ಣಗಿರಿ ಜಿಲ್ಲೆಗೆ ಭೇಟಿ ನೀಡಿದ್ದು ತನಿಖೆ ಮುಂದುವರೆಸಿದ್ದಾರೆ....
ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ...
ದಕ್ಷಿಣ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಜ.19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಿದೆ.
ಹಿಂದೆ ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದ ಅನಂತರ ಮತ್ತು ಕರ್ನಾಟಕದಲ್ಲಿ ಬಿಜೆಪಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ...
ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...
ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ.
ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ...
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು...
ಉತ್ತರಾ ಮಳೆಯ ಅಬ್ಬರಕ್ಕೆ ಸಿಲಿಕಾನ್ ಇಟಿ ಬೆಂಗಳೂರು ಸಂಪೂರ್ಣ ತತ್ತರಗೊಂಡಿದೆ. ಸಂಜೆಯ ವೇಳೆ ಸುರಿದ ಧಾರಾಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ವರ್ಷದ ಅತಿದೊಡ್ಡ ಮಳೆಯಾಗಿದ್ದು, ಇದರಿಂದ ಭಾಗಶ: ಬೆಂಗಳೂರು ಜಾವೃತಗೊಂಡಿತು.
ಪ್ರಸಕ್ತ ಮುಂಗಾರಿನ ಜೂನ್ ಸೆಪ್ಟೆಂಬರ್ ಅವಧಿಯಲ್ಲಿ ಸುರಿದ ಅತ್ಯಧಿಕ...
ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...
ಆಧಾರ್ ಕಾರ್ಡ್ ನ್ಯೂನತೆಗಳ ಬಗ್ಗೆ ಈ ಹಿಂದೆ ಹಲವು ಆರೋಪಗಳನ್ನು ಕೇಳಿದ್ದೀವಿ, ಗುಜರಾತ್ ನಲ್ಲಿ ನಾಯಿಗೂ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ ಸಕಲ ಸೃಷ್ಠಿಗೂ ಆಧಾರವಾಗಿರುವ ದೇವರಿಗೇ ನಮ್ಮ ಘನ ಸರ್ಕಾರ ಆಧಾರ್ ಕಾರ್ಡ್ ನೀಡಿದೆ.
ಅಂದಹಾಗೆ ಆಧಾರ್...
3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...
ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ, ರಾಜ್ಯ ಸರ್ಕಾರ ಅತ್ಯಾಚಾರಿಗಳ ಮೇಲೆ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರೂ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ.
ಬಿಹಾರದ ಯುವತಿ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ನಡೆಸಲಾಗಿದ್ದು ತಾವರೆಕೆರೆ ಪೊಲೀಸ್...
'ಬೆಂಗಳೂರು' ನಗರದ ಹೊರವಲಯದಲ್ಲಿ ನಡೆದಿರುವ ಬಿಹಾರ ಮೂಲದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ರಾಮನಗರ ಎಸ್.ಪಿ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ಧ ಸಿ.ಆರ್.ಪಿ.ಸಿ ಸೆಕ್ಷನ್ 376(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣ ದಾಖಲಾಗಿರುವ ತಾವರೆಕೆರೆ ಪೊಲೀಸ್...
ಆಫ್ರಿಕಾ ಖಂಡದಲ್ಲಿ ಕಾಣಿಸಿಕೊಂಡಿರುವ ಎಬೋಲ ರೋಗವು ತೀವ್ರತರವಾದ ಸೋಂಕಿನಿಂದ ಕೂಡಿದ ಮತ್ತು ಮಾರಣಾಂತಿಕ ರೋಗವಾಗಿದೆ. ಈ ರೋಗವು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಸಲಹೆ...