ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ. ಗೋವು ಒಂದು ಜೀವ ಮಾತ್ರವಲ್ಲ, ಆರೋಗ್ಯ - ಸಂಪತ್ತು - ಪುಣ್ಯಗಳನ್ನು ಅನುಗ್ರಹಿಸುವ ದೇವ ಕೂಡ ಹೌದು. ಗೋಪಾಷ್ಟಮಿಯ ದಿನದಂದು ಶ್ರೀಕೃಷ್ಣ ಗೋಪಾಲಕನಾದ,...
ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...
ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...
ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...
ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಸಂಪನ್ನವಾಗಲಿದ್ದು, ವಿಶಿಷ್ಟವಾದ ‘ಗೋ-ಗಣಪತಿ’ಯ ಉಪಾಸನೆ ನಡೆಯಲಿದೆ.
ಸಂಪೂರ್ಣ ಗೋಮಯದಿಂದ ತಯಾರಿಸಲಾದ, ಗೋವಿನೊಂದಿಗಿರುವ ಗಣಪತಿಯನ್ನು ಗಣೇಶ ಚತುರ್ಥಿಯಂದು...
ಗೋರಕ್ಷಕರಿಗೆ ನಮ್ಮ ಬೆಂಬಲವಿದೆ, ಗೋರಕ್ಷಣೆಯನ್ನು ನಾವು ಬೆಂಬಲಿಸುತ್ತೇವೆ ಆದರೆ ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ನಮ್ಮ ಸಹಮತವಿಲ್ಲ. ಸರ್ಕಾರಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಗೋರಕ್ಷಕರಿಗೆ ಕೆಲಸವೇ ಇರುವುದಿಲ್ಲ. ಭಯೋತ್ಪಾದನಾ ನಿಗ್ರಹದಳ, ನಕ್ಸಲ್ ನಿಗ್ರಹ ದಳ ಇದ್ದಂತೆ ಅಮೂಲ್ಯವಾದ ಗೋಮಾತೆಯ ರಕ್ಷಣೆಗೂ ಒಂದು...
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀ ರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು ನಿರೂಪಿಸಿದ...
ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ...
ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವ್ಯಾಖ್ಯಾನಿಸಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ...
ಸರ್ವ ಕಾಲ, ಸರ್ವ ದೇಶ, ಸರ್ವ ಸಮಯ, ಸರ್ವ ಜನಾಂಗಗಳಲ್ಲಿಯೂ ಸಲ್ಲುವಂತಹ ನಿಯಮಗಳು ಇರುತ್ತವೆ, ಅವುಗಳಲ್ಲಿ ಒಂದು 'ಯಾವುದು ನಿನಗೆ ಹಿಂಸೆಯೋ ಅದನ್ನು ಬೇರೆಯವರಿಗೆ ಮಾಡಬೇಡ'. ಈ ನಿಯಮವನ್ನು ಎಲ್ಲರೂ ಪಾಲಿಸಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು....
ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಬೆಂಗಳೂರಿನ...
ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ...
ನೂರಾರು ಜೀವಿಗಳಿಗೆ ಒಳಿತೆಸಗುವ ಈ ಪ್ರಪಂಚದಲ್ಲಿ ಬದುಕುವ ಹಕ್ಕು ನಮ್ಮೆಲ್ಲರಿಗಿಂತ ಜಾಸ್ತಿ ಗೋವಿಗೆ ಇದೆ. ಅಂತಹ ಪರೋಪಕಾರಿ ಜೀವಿಯ ಜೀವಕ್ಕೆ ಕೈ ಹಾಕಬಾರದು ಎಂದು ಶ್ರೀ ರಾಮಚಂದ್ರಾಪುರದ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
...
ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. 'ಗಾವೋ ವಿಶ್ವಸ್ಯ ಮಾತರಃ', ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ...
ಮಾನವನ ಪ್ರಾಣ ಹೊರಟುಹೋದರೆ ಉಳಿದ ಅಂಗಾಂಗಗಳು ನಿಷ್ಕ್ರಿಯವಾಗುತ್ತವೆ. ಹಾಗೆಯೇ ಗೋವಿನ ಹತ್ಯೆ ಸರ್ವನಾಶಕ್ಕೆ ಕಾರಣವಾಗುತ್ತದೆ. ಗೋವು ಸೃಷ್ಟಿಯ ಅಂಗ, ಉತ್ತಮಾಂಗ ಮಾತ್ರವಲ್ಲ ಮುಖ್ಯಾಂಗ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಮರದಲ್ಲಿ ಕುಳಿತು ಕೊಡಲಿಯಿಂದ ಬುಡವನ್ನು ಕಡಿದು ಸಂಭವಿಸಬಹುದಾದ...
ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ 'ಗೋಕಥೆ'ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು,...
ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ,...
ಸಂತರು ಪೂಜ್ಯರು, ಗೋಮಾತೆ ಪೂಜ್ಯರಿಗೂ ಪೂಜ್ಯಳು. ಗೋವಿನ ತ್ಯಾಜ್ಯವೂ ಸರ್ವಮಾನ್ಯವಾದುದು. ಆದರೆ ಇಂದು ಗೋಹತ್ಯೆ ಮಾತ್ರವಲ್ಲ, ಗೋಕ್ಷೀರದ ಹತ್ಯೆಯೂ ನಡೆಯುತ್ತಿದೆ, ರಾಸಾಯನಿಕ ಬಳಸಿ ಹಾಲಿನಲ್ಲಿರುವ ಗುಣಗಳನ್ನು ಕೊಲ್ಲಲಾಗುತ್ತಿದ್ದು, ಹಾಲು ಎಂಬ ಹೆಸರಿನಲ್ಲಿ ಬಿಳಿದ್ರವವನ್ನು ಮಾರಲಾಗುತ್ತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ...
ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...
ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ...
ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಕರೆ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ಶ್ರೀಪರಿವಾರದ ಸರ್ವಸೇವೆಯನ್ನು ಸ್ವೀಕರಿಸಿ...
ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀ ರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ...
ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ.
ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ಭಾರತೀಪ್ರಕಾಶನವು ಪ್ರಕಟಿಸಿದ 'ಗುರುಗ್ರಂಥಮಾಲಿಕೆ' ಲಿಮ್ಕಾ ದಾಖಲೆ ನಿರ್ಮಿಸಿದೆ. 60 ದಿನಗಳ ಕಾಲ ದಿನಕ್ಕೊಂದರಂತೆ 60 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದ್ದನ್ನು ಪುರಸ್ಕರಿಸಿ 'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಇದೊಂದು ದಾಖಲೆಯ ಕಾರ್ಯವೆಂದು ಪ್ರಶಂಸಿಸಿದೆ. ( Link : ...
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ 'ಜೀವಜಲ ಉಚಿತ ವಿತರಣಾ' ಯೋಜನೆಯಡಿ ಗೋಕರ್ಣದ ಸುತ್ತಲಿನ ಗ್ರಾಮಗಳಿಗೆ ಉಚಿತವಾಗಿ ಶುದ್ಧವಾದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಈ ಜನಪರ ಯೋಜನೆಯ ಬಗ್ಗೆ ತಿಪ್ಪಸಗಿ, ಕಟನಬಾವಿ ಗ್ರಾಮದ ಫಲಾನುಭವಿ ಜನರು...
ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.
ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...
ಎಲ್ಲ ಪಂಡಿತರು, ವೈದ್ಯರು, ಕೌಸಲ್ಯೆ ಹೊಟ್ಟೆಯಲ್ಲಿ ಯಾವ ಜೀವಾತ್ಮವೂ ಜನ್ಮ ತಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಕೌಸಲ್ಯೆಯು ಗೋಮಾತೆಯ ಹಾಲಿನಿಂದ ತಯಾರಿಸಿದ ಪಾಯಸ ಕುಡಿದದ್ದರಿಂದ ಆಕೆಯ ಉದರದಲ್ಲಿ ಪರಮಾತ್ಮ ಶ್ರೀರಾಮನೇ ಜನಿಸಿದ ಎಂದು ಖ್ಯಾತ ಗೋಕಥೆಗಾರ ಮೊಹ್ಮದ್ ಫೈಜ್ ಖಾನ್...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಮಂಗಳವಾರ ಆಗಮಿಸಿ, ಶ್ರೀ ಮಹಾಬಲೇಶ್ವರ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ 305 ದಿನಗಳ ನಂತರ ಶ್ರೀ ಸವಾರಿಯ ಸಂಚಾರವು ಶ್ರೀ ಕ್ಷೇತ್ರ ಗೋಕರ್ಣದ...
ಅಖಿಲ ಹವ್ಯಕ ಮಹಾಸಭೆ(ರಿ) ಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ, ಶ್ರೀ ರಾಮಚಂದ್ರಾಪುರ ಮಠಕ್ಕೆ ನಿಷ್ಟರಾಗಿರುವ ಅಶೋಕೆ ಬಳಗ ಭರ್ಜರಿ ಜಯಗಳಿಸಿತ್ತು. ಈ ಹಿನ್ನಲೆಯಲ್ಲಿ ನೂತನ ಆಡಳಿತ ಮಂಡಳಿ ಸದಸ್ಯರು ಗಿರಿನಗರದ ಶ್ರೀ ರಾಮಶ್ರಮಕ್ಕೆ ಆಗಮಿಸಿ, ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರನ್ನು...
ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಬೆಳಗ್ಗೆ...
ಸೋಮವಾರ, ಫೆ.29 ರಿಂದ ನಿತ್ಯ ಸೂರ್ಯೋದಯದೊಂದಿಗೆ 'ಸತ್ಯ ಸೂರ್ಯೋದಯ' ಕಾರ್ಯಕ್ರಮವನ್ನು ವೀಕ್ಷಿಸುತ್ತಾ ದಿನಾರಂಭಿಸುವ ಸುಯೋಗ ನಮ್ಮೆಲ್ಲರದ್ದಾಗಲಿದೆ.
ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಪ್ರವಚನಧಾರೆ ಹಾಗೂ ಸಂವಾದಗಳಿಂದ ಕೂಡಿದ ವಿಶಿಷ್ಟ ಪರಿಕಲ್ಪನೆಯ 'ಸತ್ಯ ಸೂರ್ಯೋದಯ' ಎಂಬ ಕಾರ್ಯಕ್ರಮ ಸರಣಿ ಪ್ರಜಾ ಟಿವಿಯಲ್ಲಿ...
ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...
ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...